ಕರೋನಾ ಮಹಾಮಾರಿ ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಗೊಂಡಿರುವ ರಾಜ್ಯ ಸರ್ಕಾರ, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ಸಭೆ ನಡೆಸಿದೆ.
Hon’ble CM Shri @BSBommai chaired a high-level meeting today to take stock of the Covid-19 situation and discuss measures to prevent and mitigate the spread of infection.
🔹Experts of Technical Advisory Committee briefed about prevailing global situation and new variants.
1/4 pic.twitter.com/FqNq1gz078
— Dr Sudhakar K (@mla_sudhakar) December 22, 2022
ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಎಸಿ ಹಾಲ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಧರಿಸಬೇಕು. ತಕ್ಷಣಕ್ಕೆ ಎಲ್ಲಾ ಕಡೆ ಸ್ಕ್ರೀನಿಂಗ್ ಮಾಡಲ್ಲ. ದೇಶದಿಂದ ಬರುವ ಶೇ.3ರಷ್ಟು ಜನರಿಗೆ ವಿಮಾನ ನಿಲ್ದಾಣದಲ್ಲಿ ರ್ಯಾಂಡಮ್ ಸ್ಯಾಂಪಲ್ ಪರೀಕ್ಷೆ ಮಾಡಲಾಗುವುದು. ರಾಜ್ಯದಲ್ಲಿ ಸದ್ಯ 4 ಸಾವಿರ ಕೋವಿಡ್ ಟೆಸ್ಟ್ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಕೋವಿಡ್ ಟೆಸ್ಟ್ ಪ್ರಮಾಣ ಹೆಚ್ಚಿಸುತ್ತೇವೆ. ಕೊರೋನಾ ರೂಪಾಂತರಿ ತಳಿ ವೇಗವಾಗಿ ಹರಡುವ ಮಾಹಿತಿಯಿದೆ. ಮತ್ತಷ್ಟು ವರದಿ ಬಂದ ನಂತರ ಅಧ್ಯಯನ ಮಾಡಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಬೂಸ್ಟರ್ ಡೋಸ್ ಪಡೆಯಿರಿ
ಆದಷ್ಟು ಬೇಗ ಎಲ್ಲರೂ ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು. ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಹಾಸಿಗೆ ಮೀಸಲಿಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಚಿಕಿತ್ಸೆಗೆ ಹಾಸಿಗೆ ಮೀಸಲಿಡಲಾಗಿದೆ. ಕೋವಿಡ್ ಕಡಿಮೆಯಾದ ಹಿನ್ನೆಲೆ ಲಸಿಕೆ ಪಡೆಯಲು ಮೀನಮೇಷ ಮಾಡಬಾರದು. ಎಲ್ಲರೂ ಬೂಸ್ಟರ್ ಡೋಸ್ ಪಡೆಯಬೇಕು. ಶೇಕಡಾ 20ರಷ್ಟು ಜನರು ಮಾತ್ರ ಬೂಸ್ಟರ್ ಡೋಸ್ ಪಡೆದಿದ್ದಾರೆ. ಎಲ್ಲಾ ಕಡೆ ಕ್ಯಾಂಪ್ ಮಾಡಿ ಬೂಸ್ಟರ್ ಡೋಸ್ ನೀಡಲು ನಿರ್ಧರಿಸಲಾಗಿದೆ ಎಂದರು.