Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿಶ್ವಾಸ್ ಚಿಕಿತ್ಸೆಗೆ ನೆರವು ನೀಡಿದ ಸಿ.ಪಿ.ಉಮೇಶ್

ಮಂಡ್ಯದ ರಾಷ್ಟ್ರೀಯ ಫುಟ್ಬಾಲ್ ಕ್ರೀಡಾಪಟು ವಿಶ್ವಾಸ್ ರವರ ಚಿಕಿತ್ಸೆಗಾಗಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್ ರವರು 50,000 ರೂ.ಗಳನ್ನು ನೀಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ.

ಪಿಇಎಸ್ ಕಾಲೇಜಿನಲ್ಲಿ ಬಿ.ಕಾಂ.ವ್ಯಾಸಂಗ ಮಾಡುತ್ತಿರುವ ವಿಶ್ವಾಸ್ ಕಳೆದ ಜುಲೈ 1 ರಂದು ವಿದ್ಯುತ್ ಶಾಕ್ ಗೆ ಒಳಗಾಗಿ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಚಿಕಿತ್ಸೆ ವೆಚ್ಚ ಭರಿಸಲು ಅವರ ಕುಟುಂಬಕ್ಕೆ ಕಷ್ಟವಾದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದರು.

ಈ ವಿಷಯ ತಿಳಿದ ಬಿಜೆಪಿ ಜಿಲ್ಲಾಧ್ಯಕ ಸಿ.ಪಿ.ಉಮೇಶ್ ಪಕ್ಷದ ವತಿಯಿಂದ 50,000 ರೂ. ಹಣವನ್ನು ವಿಶ್ವಾಸ್ ಚಿಕಿತ್ಸೆಗೆ ನೀಡುವ ಮೂಲಕ ಆತನ ನೆರವಿಗೆ ಧಾವಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!