Thursday, September 19, 2024

ಪ್ರಾಯೋಗಿಕ ಆವೃತ್ತಿ

ತಮಿಳುನಾಡು| ಅಂಗಾಂಗ ದಾನ ಮಾಡುವವರಿಗೆ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ

ಅಂಗಾಂಗ ದಾನ ಮಾಡುವವರ ಅಂತ್ಯ ಸಂಸ್ಕಾರವನ್ನು ಸಕಲ ಸರಕಾರಿ ಗೌರವದೊಂದಿಗೆ ಮಾಡಲಾಗುವುದು ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್‌ ಅವರು ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಸ್ಟಾಲಿನ್‌ ಅವರು, ತಮಿಳುನಾಡು ಅಂಗಾಂಗ ದಾನಗಳಲ್ಲಿ ದೇಶದಲ್ಲಿ  ಮುಂದುವರಿದ ರಾಜ್ಯವಾಗಿದೆ. ಈ ಮೂಲಕ ನೂರಾರು ರೋಗಿಗಳಿಗೆ ಹೊಸ ಜೀವನ ಕೊಟ್ಟಿದೆ ಎಂದು ಹೇಳಿದ್ದಾರೆ.

“>

ನೋವಿನ ಸಂದರ್ಭಗಳಲ್ಲಿ ತಮ್ಮ ಆತ್ಮೀಯರ ಅಂಗಾಂಗಗಳನ್ನು ದಾನ ಮಾಡಲು ಮುಂದೆ ಬರುವ ಕುಟುಂಬಗಳ ನಿಸ್ವಾರ್ಥ ತ್ಯಾಗದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಸ್ಟಾಲಿನ್ ಇದೇ ವೇಳೆ ಹೇಳಿದ್ದಾರೆ.

ಅಂಗಾಂಗ ದಾನಿಗಳು ಮತ್ತು ಅವರ ಕುಟುಂಬದವರ ತ್ಯಾಗವನ್ನು ಗೌರವಿಸುವ ಸಲುವಾಗಿ ಸರ್ಕಾರವು ಅಂತ್ಯಕ್ರಿಯೆಗೆ ಸರ್ಕಾರಿ ಗೌರವವನ್ನು ನೀಡಲು ನಿರ್ಧರಿಸಿದೆ ಎಂದು ಸಿಎಂ ಎಂಕೆ ಸ್ಟಾಲಿನ್‌ ಅವರು ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!