ಗುಂಪುಗಳನ್ನು ಪ್ರಚೋದಿಸುತ್ತಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ರಾಜ್ಯ ಡಿಜಿಪಿಗೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಗುವಾಹಟಿಯ ಹೊರವಲಯದಲ್ಲಿ ಘರ್ಷಣೆಯುಂಟಾದ ನಂತರ ಈ ಘಟನೆ ನಡೆದಿದೆ.
ರಾಹುಲ್ ನೇತೃತ್ವದಲ್ಲಿ ಸಾಗುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಗುವಾಹಟಿ ಪ್ರವೇಶಿಸಲು ಅಸ್ಸಾಂ ಪೊಲೀಸರು ತಡೆಯೊಡ್ಡಿದ್ದಾರೆ. ತಡೆ ನೀಡಿರುವ ಬಗ್ಗೆ ಇಂದು ಬೆಳಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಘರ್ಷಣೆ ಉಂಟಾಗಿತ್ತು.
ನಂತರ ನಗರದ ಹೊರ ವಲಯದಲ್ಲಿ ಮಾತನಾಡಿದ ರಾಹುಲ್, ನಾವು ಬ್ಯಾರಿಕೇಡ್ಗಳನ್ನು ಮುರಿದಿದ್ದೇವೆ ವಿನಃ ಕಾನೂನನ್ನು ಮುರಿದಿಲ್ಲ ಎಂದು ಹೇಳಿದ್ದರು.
“ಇದು ಅಸ್ಸಾಂ ಸಂಸ್ಕೃತಿಯಲ್ಲ. ನಮ್ಮದು ಶಾಂತಿಯುತ ರಾಜ್ಯ. ಇಂತಹ ನಕ್ಸಲ್ ತಂತ್ರವು ಸಂಪೂರ್ಣವಾಗಿ ನಮ್ಮ ಸಂಸ್ಕೃತಿಗೆ ಪರಕೀಯವಾಗಿರುತ್ತವೆ. ಈ ಹಿನ್ನಲೆಯಲ್ಲಿ ನಾನು ಅಸ್ಸಾಂ ಡಿಜಿಪಿಗೆ ರಾಹುಲ್ ಗಾಂಧಿ ವಿರುದ್ಧ ಗುಂಪನ್ನು ಪ್ರಜೋದಿಸುತ್ತಿರುವ ಆರೋಪದ ಮೇಲೆ ದೂರು ದಾಖಲಿಸಲು ತಿಳಿಸಿದ್ದೇನೆ” ಎಂದು ಹೇಳಿದ್ದಾರೆ.
ಕೃಪೆ:ಈದಿನ.ಕಾಂ