Wednesday, May 15, 2024

ಪ್ರಾಯೋಗಿಕ ಆವೃತ್ತಿ

ರಾಜ್ಯಕ್ಕೆ 14.75 ಟಿಎಂಸಿ ಹೆಚ್ಚುವರಿ ಕಾವೇರಿ ನೀರು ಸಿಗಲು ದೇವೇಗೌಡರೇ ಕಾರಣ:ಸಿ.ಎಸ್. ಪುಟ್ಟರಾಜು

ಕಾವೇರಿ ನೀರಿನ ಹಂಚಿಕೆ ವಿಷಯದಲ್ಲಿ ದೇವೇಗೌಡರು ಮಾಡಿದ ಹೋರಾಟದ ಫಲವಾಗಿ 14.75 ಟಿಎಂಸಿ ಹೆಚ್ಚವರಿ ನೀರು ರಾಜ್ಯಕ್ಕೆ ಸಿಗುವಂತಾಯಿತು ಎಂದು ಸಿ.ಎಸ್.ಪುಟ್ಟರಾಜು ತಿಳಿಸಿದರು. ಶ್ರೀರಂಗಪಟ್ಟಣ ನಡೆದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾವೇರಿ ನೀರಿನ ವಿಚಾರದಲ್ಲಿ ದೇವೇಗೌಡರು ಮಾಡಿದ ಹೋರಾಟದ ಬಗ್ಗೆ ರಾಜ್ಯದ ಜನತೆಗೆ ಗೊತ್ತಿದೆ.ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ದೇವೇಗೌಡರಿಗೆ ಇರುವಷ್ಟು ಮಾಹಿತಿ ಅಗಾಧವಾದುದು.ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ಸಿಗಲು ದೇವೇಗೌಡರು ವಿಧಾನಸೌಧ ದಲ್ಲಿರುವ ಗಾಂಧಿ ಪ್ರತಿಮೆಯ ಮುಂದೆ ಉಪವಾಸ ಸತ್ಯಾಗ್ರಹ ನಡೆಸಿದರು. ನದಿ ನೀರಿನ ವಿಚಾರದಲ್ಲಿ ಅವರ ಬದ್ಧತೆ ದೊಡ್ದದು. ನೀರಾವರಿ ವಿಚಾರದಲ್ಲಿ ಅನ್ಯಾಯವಾದರೆ ಅದರ ಪರಿಣಾಮ ನಮ್ಮ ರಾಜ್ಯದ ರೈತರ ಮೇಲಾಗುತ್ತದೆ ಎಂಬುದು ದೇವೇಗೌಡರಿಗೆ ಚೆನ್ನಾಗಿಯೇ ಅರಿವಿದ್ದರಿಂದ ರಾಜ್ಯಕ್ಕೆ ನದಿ ನೀರಿನ ವಿಚಾರದಲ್ಲಿ ಅನ್ಯಾಯವಾದಾಗಲೆಲ್ಲ ಸಂಸತ್ತಿನಲ್ಲಿ, ನ್ಯಾಯಾಲಯದಲ್ಲಿ ಹೋರಾಟ ನಡೆಸಿದ್ದಾರೆ ಎಂದರು.

ದೇವೇಗೌಡರು ಈ ಇಳಿವಯಸ್ಸಿನಲ್ಲಿಯೂ ರೈತರ ಪರ ಸಕ್ರಿಯರಾಗಿ ಹೋರಾಟ ನಡೆಸುತ್ತಿದ್ದಾರೆ.ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಅವರು ದೇಶಕ್ಕೆ,ರೈತರಿಗೆ ನೀಡಿದ ಕಾರ್ಯಕ್ರಮಗಳನ್ನು ಉತ್ತರ ಭಾರತದ ಜನರು ಈಗಲೂ ನೆನಪಿಸಿ ಕೊಳ್ಳುವುದನ್ನ ನಾನು ಸಂಸದನಾಗಿದ್ದಾಗ ಬಹಳ ಹತ್ತಿರದಿಂದ ನೋಡಿದ್ದೇನೆ. ಆ ಭಾಗದ ದೊಡ್ಡ ರಾಜಕಾರಣಿಗಳ ಮಕ್ಕಳು ಸಂಸತ್ ಸದಸ್ಯರಾಗಿ ಲೋಕಸಭೆಗೆ ಬಂದಾಗ ದೇವೇಗೌಡರು ಕಾಲಿಗೆ ಬಿದ್ದು ಆಶೀರ್ವಾದ ಪಡೆಯುವುದನ್ನು ನಾನು ನೋಡಿದ್ದೇನೆ ಎಂದು ಬಣ್ಣಿಸಿದರು.

Previous article
ರಾಜ್ಯದ ಎಲ್ಲಾ ನದಿಗಳ ಪರ ಜೆಡಿಎಸ್ ಹೋರಾಡುತ್ತಿದೆ:ರವೀಂದ್ರ ಶ್ರೀಕಂಠಯ್ಯ
ಕಾಂಗ್ರೆಸ್ ಪಕ್ಷ ಮೇಕೆದಾಟು ವಿಚಾರವನ್ನು ಮುಂದಿಟ್ಟುಕೊಂಡು ಮಾತ್ರ ಪಾದಯಾತ್ರೆ ಮಾಡಿದೆ.ಆದರೆ ಜೆಡಿಎಸ್ ಪಕ್ಷ ದೇವೇಗೌಡರ ನೇತೃತ್ವದಲ್ಲಿ ಕಾವೇರಿ, ಕೃಷ್ಣ,ಮಹದಾಯಿ ಸೇರಿದಂತೆ ರಾಜ್ಯದ ಎಲ್ಲಾ ನದಿಗಳ ವಿಚಾರದಲ್ಲಿ ಮೊದಲಿನಿಂದಲೂ ಹೋರಾಟ ನಡೆಸಿಕೊಂಡು ಬಂದಿದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಗುಡುಗಿದರು.
ಶ್ರೀರಂಗಪಟ್ಟಣದಲ್ಲಿ ನಡೆದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಮೇಕೆದಾಟು ಯೋಜನೆ ತನ್ನದು ಎಂದು ಕಾಂಗ್ರೆಸ್ ಪಕ್ಷ ಹೇಳಿಕೊಳ್ಳುತ್ತದೆ.ಆದರೆ ಮೇಕೆದಾಟು ಅಣೆಕಟ್ಟಿನ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದ್ದು ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ. ಜೆಡಿಎಸ್ ಪಕ್ಷ ಮೊದಲಿನಿಂದಲೂ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ರಾಜ್ಯದ ಎಲ್ಲಾ ನದಿಗಳ ಪರ ಹೋರಾಟ ರೂಪಿಸಿಕೊಂಡು ಬಂದಿದೆ.ನೀರಾವರಿ ವಿಚಾರದಲ್ಲಿ ಜೆಡಿಎಸ್ ಹೋರಾಟ ಎಂದೆಂದಿಗೂ ನಿರಂತರವಾಗಿ ಇರುತ್ತದೆ ಎಂದರು.
ರಾಜ್ಯದಲ್ಲಿ ನೀರಾವರಿ ಯೋಜನೆಗಳಿಗೆ ಅತಿಹೆಚ್ಚು ಅನುದಾನ ನೀಡಿದ ಹೆಗ್ಗಳಿಕೆ ಜೆಡಿಎಸ್ ಪಕ್ಷಕ್ಕೆ ಸಲ್ಲುತ್ತದೆ. ಕಾವೇರಿ ವಿಚಾರದಲ್ಲಿ ದೇವೇಗೌಡರು ಉಪವಾಸ ಸತ್ಯಾಗ್ರಹ ಮಾಡಿದಾಗ ನ್ಯಾಯಾಲಯ ಮತ್ತು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದರಿಂದ ರಾಜ್ಯಕ್ಕೆ ಹೆಚ್ಚವರಿ ಪಾಲು ದೊರೆಯಿತು ಎಂದರು.
Next article

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!