Tuesday, September 17, 2024

ಪ್ರಾಯೋಗಿಕ ಆವೃತ್ತಿ

ಶಾಸಕತ್ವದ ಅವಧಿಯಲ್ಲಿ ಮಹತ್ವದ ಅಭಿವೃದ್ದಿ- ಡಿ.ಸಿ.ತಮ್ಮಣ್ಣ

ನನ್ನ ಶಾಸಕತ್ವದ ಅವಧಿಯಲ್ಲಿ ಶಿಕ್ಷಣಕ್ಷೇತ್ರಕ್ಕೆ ಹೆಚ್ಚು ಮಹತ್ವ ನೀಡಿ ಸರ್ಕಾರಿ ಶಾಲಾ-ಕಾಲೇಜುಗಳನ್ನು ಅಭಿವೃದ್ದಿ ಪಡಿಸಿದ್ದೇನೆಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.

ಮದ್ದೂರು ತಾಲ್ಲೂಕು ದೊಡ್ಡರಸಿನಕೆರೆ ಕಾಳಿಕಾಂಭ ಪ್ರೌಢಶಾಲೆಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅಧ್ಯಕ್ಷತೆಯಲ್ಲಿ ನಡೆದ ಉದ್ಯೋಗಿ ಬಳಗದ ಸದಸ್ಯರ ಸಭೆ ಹಾಗೂ ಪೋಷಕರ ಸಭೆಯಲ್ಲಿ ಅವರು ಮಾತನಾಡಿದರು.

ಮಕ್ಕಳ ಅಭಿವೃದ್ದಿಗಾಗಿ ಮತ್ತು ಶಿಕ್ಷಣಕ್ಕಾಗಿ ಶ್ರಮಿಸುವಂತಹ ಯಾವುದೇ ಜನಪ್ರತಿನಿಧಿಗಳಾದರೂ ನಾನು ಅವರನ್ನು ಗೌರವಿಸಿ ಅಭಿನಂದಿಸುತ್ತೇನೆ. ನನ್ನ ಅಭಿವೃದ್ದಿ ಕೆಲಸಗಳು ಕ್ಷೇತ್ರದಲ್ಲಿ ಗುರುತು ಇರುವಂತೆ ಮಾಡಿದ್ದೇನೆ. ಯಾವುದೋ ಆಮಿಷಗಳಿಗೆ ಮತ್ತು ಬಣ್ಣದ ಮಾತುಗಳಿಗೆ ಮರುಳಾಗದೆ ಜಾಗೃತರಾಗಿರಿ ಎಂದು ಕಿವಿಮಾತು ಹೇಳಿದರು.

ಜಾಹೀರಾತು

ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳು ಜೊತೆ ಶಾಲೆಯ ಅಭಿವೃದ್ದಿ ಬಗ್ಗೆ ಸಮಾಲೋಚನೆ ನಡೆಸಿದರು.

ಇದೇ ವೇಳೆ ಕಾಳಿಕಾಂಭ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಎಂ.ಕೆ.ನಾರಾಯಣ್, ಕಾರ್ಯದರ್ಶಿ ಮಂಚೇಗೌಡ, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಹೊನ್ನೇಗೌಡ, ನಿರ್ದೇಶಕ ಪ್ರೊ.ಎಚ್.ಬಿಳೀಗೌಡ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯಶಿಕ್ಷಕರು ಮತ್ತು ಸಹಶಿಕ್ಷಕರು, ಉದ್ಯೋಗಿ ಬಳಗದ ಸದಸ್ಯರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!