Friday, September 20, 2024

ಪ್ರಾಯೋಗಿಕ ಆವೃತ್ತಿ

ಕಲ್ಲಡ್ಕ ಪ್ರಭಾಕರ್ ಭಟ್ ಗೆ ಜಾಮೀನು ಕೊಡಿಸಿದ ವಕೀಲ ಡಿ.ಚಂದ್ರೇಗೌಡ ಕಾಂಗ್ರೆಸ್ ಪಕ್ಷದಿಂದ ವಜಾ

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿ, ನೀರಿಕ್ಷಣಾ ಜಾಮೀನು ಕೊಡಿಸಿದ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾನೂನು ಘಟಕದ ತಾಲ್ಲೂಕು ಅಧ್ಯಕ್ಷ ಡಿ.ಚಂದ್ರೇಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.

ವಕೀಲ ಡಿ.ಚಂದ್ರೇಗೌಡ, ಕಲ್ಲಡ್ಕ ಪ್ರಭಾಕರ್ ಭಟ್ ಪ್ರಚೋದನಾಕಾರಿ ಭಾಷಣ ಮಾಡಿದ ಹಾಗೂ ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಭಾಷಣ ಮಾಡಿದ ಆರೋಪದಡಿ ಕಲಂ 354, 294, 509, 506, 295, 298 ಇತ್ಯಾದಿ ಅಡಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಕಲ್ಲಡ್ಕ ಪ್ರಭಾಕರ್ ಪರ ವಕಾಲತ್ತು ವಹಿಸಿ, ಅವರಿಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಕೊಡಿಸಿದ್ದು, ಈ ನಡವಳಿಕೆಯು ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ನಿಯಮ ನಿಬಂಧನೆಗಳಿಗೆ ವಿರುದ್ಧವಾಗಿರುವುದರಿಂದ ಅವರನ್ನು ಶ್ರೀರಂಗಪಟ್ಟಣ ತಾಲ್ಲೂಕು ಕಾನೂನು ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ ಎಂದು ಕಾನೂನು ಘಟಕದ ಮಂಡ್ಯ ಜಿಲ್ಲಾಧ್ಯಕ್ಷ ಎ.ಎಸ್.ಗೌರಿಶಂಕರ್ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!