ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ಜೊತೆ ಸೌಜನ್ಯಯುತವಾಗಿ ವರ್ತಿಸಬೇಕೆಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೂಚಿಸಿದರು.
ಪಾಂಡವಪುರ ಪುರಸಭೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿ, ಪಾಂಡವಪುರ ಪುರಸಭೆ ವ್ಯಾಪ್ತಿಯಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.
ಜನಸಾಮಾನ್ಯರ ಕೆಲಸಗಳನ್ನು ವಿಳಂಬ ಮಾಡದೇ ನಿರ್ವಹಿಸಬೇಕು, ಅವರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ ಪರಿಹಾರ ಒದಗಿಸಬೇಕೆಂದು ಸೂಚನೆ ನೀಡಿದರು.
ಈ ಸಂದರ್ಭ ಪುರಸಭೆಯ ಅಧಿಕಾರಿಗಳು ಪುರಸಭೆಯ ಅಧ್ಯಕ್ಷರು, ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.