ಮನೆ ಬಾಗಿಲಿಗೆ ಸರ್ಕಾರದ ಸೇವೆಗಳನ್ನು ನೀಡುವ ಜನಸ್ಪಂದನ ಕಾರ್ಯಕ್ರಮವನ್ನು ಬಳಸಿಕೊಂಡು ಸಾರ್ವಜನಿಕರು ಸಮಸ್ಯೆಗಳಿಂದ ಮುಕ್ತರಾಗಿ ನೆಮ್ಮದಿ ಜೀವನ ನೆಡಸಬೇಕೆಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.
ಪಾಂಡವಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಮೂಲಭೂತ ಸೌಕರ್ಯ ಸಿಗಬೇಕು. ಸಮಾಜದಲ್ಲಿ ನೆಮ್ಮದಿಯ ಜೀವನ ನಡೆಸುವಂತಹ ಆಗಬೇಕು ಎಂಬುದೇ ನನ್ನ ಆಶಯ. ತಾಲೂಕಿನ್ಯಾದ್ಯಂತ ಹಂತ ಹಂತವಾಗಿ ಕಾರ್ಯಕ್ರಮ ನಡೆಸಲಾಗುದು. ಇಂದಿನ ಯುವ ಮಿತ್ರರಿಗೆ ಶಿಕ್ಷಣ ಮತ್ತು ನಿರುದ್ಯೋಗ ಸಮಸ್ಯೆ ಇದ್ದು ನಿವಾರಿಸಲು ನನ್ನ ಶಕ್ತಿ ಮೀರಿ ಶ್ರಮಿಸುತ್ತೇನೆ ಎಂದರು.
ತಹಸೀಲ್ದಾರ್ ಶ್ರೇಯಸ್ ಅವರಿಗೆ ನೂರಾರು ಸಂಖ್ಯೆಯಲ್ಲಿ ರೈತರು, ಮಹಿಳೆಯರು, ವಯೋವೃದ್ಧರು, ವಿಶೇಷ ಚೇತನರು ಯುವ ಮಿತ್ರರು ಮನವಿ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪಾಂಡವಪುರ ಉಪವಿಭಾಗಧಿಕಾರಿ ನಂದೀಶ್ ಹಾಗೂ ಅನೇಕ ಇಲಾಖೆಯ ಅಧಿಕಾರಿಗಳು ಘನ ಉಪಸ್ಥಿತರಿದ್ದರು. ತಾಲ್ಲೂಕು ಮಟ್ಟದ ಆಡಳಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬಿಡು ಬಿಟ್ಟು ಜನರ ಸಮಸ್ಯೆಗಳನ್ನು ಆಲಿಸಿದರು. ಕೆನ್ನಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನರು ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದರು.