Wednesday, October 23, 2024

ಪ್ರಾಯೋಗಿಕ ಆವೃತ್ತಿ

ದರ್ಶನ್ ಪುಟ್ಟಣ್ಣಯ್ಯಗೆ ಸುಮಲತಾ ಬೆಂಬಲದ ನಿರೀಕ್ಷೆ : ಶ್ಯಾಮಸುಂದರ್

ಮುಂಬರುವ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲ ನೀಡುವ ನಿರೀಕ್ಷೆ ಇದೆ ಎಂದು ಯುವ ರೈತ ಮುಖಂಡ ಶ್ಯಾಮಸುಂದರ್ ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರನ್ನು ಮೇಲುಕೋಟೆ ಕ್ಷೇತ್ರದಲ್ಲಿ ರೈತಸಂಘ ಬೆಂಬಲಿಸಿ, ಗೆಲ್ಲಿಸುವಲ್ಲಿ ಸಹಾಯ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸುಮಲತಾ ಅವರು, ದರ್ಶನ ಪುಟ್ಟಣ್ಣಯ್ಯ ಅವರ ಬೆಂಬಲಕ್ಕೆ ನಿಲ್ಲಲಿದ್ದಾರೆಂದು ಹೇಳಿದರು.

ದರ್ಶನ್ ಪುಟ್ಟಣ್ಣಯ್ಯಗೆ ವ್ಯಾಪಕ ಬೆಂಬಲ

ಮೇಲುಕೋಟೆ ಕ್ಷೇತ್ರ ವ್ಯಾಪ್ತಿಯಲ್ಲಿ ಫೆ.25ರಿಂದ ಮಾ.18ರ ವರಗೆ ನಡೆಸಿದ ‘ಜನಮನ ದರ್ಶನ ಪಾದಯಾತ್ರೆ ನಡೆಸಿದ ಸಂದರ್ಭದಲ್ಲಿ ಯುವಜನರು ಹಾಗೂ ಮಹಿಳೆಯರು ನಿರೀಕ್ಷೆಗೂ ಮೀರಿ ಸ್ವಯಂ ಪ್ರೇರಿತರಾಗಿ ವ್ಯಾಪಕ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಹಾಲಿ ಶಾಸಕರ ವಿರುದ್ದ ಆಡಳಿತ ವಿರೋಧಿ ಅಲೆ ಇದೆ, ಇದರಿಂದ ಕ್ಷೇತ್ರದ ಜನತೆ ಭ್ರಮನಿರಸನಗೊಂಡಿದ್ದು, ರೈತಸಂಘವನ್ನು ಬೆಂಬಲಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಪುಟ್ಟಣ್ಣಯ್ಯ ಅವದಿಯಲ್ಲಿ ಕಾಮಗಾರಿ ಮಂಜೂರು

ದುದ್ದ ಹೋಬಳಿಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕೆ.ಎಸ್.ಪುಟ್ಟಣ್ಣಯ್ಯ ಅವರು ಶಾಸಕರಾಗಿದ್ದ ಅವದಿಯಲ್ಲಿ ಮಂಜೂರಾಗಿತ್ತು. ಆಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು. ಆದರೆ 54 ಕೆರೆಗಳಿಗೆ ನೀರು ತಂದೆ ಎಂದು ಶಾಸಕ ಪುಟ್ಟರಾಜು ಹೇಳಿಕೊಳ್ಳುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಚಾರ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆಂದು ಹೇಳಿದರು.

ಗೋಷ್ಠಿಯಲ್ಲಿ ರೈತ ಮುಖಂಡರಾದ ನಾಗರಾಜು ಮಲ್ಲನಾಯಕನಕಟ್ಟೆ, ಅಣ್ಣಯ್ಯ ಜಿ.ಮಲ್ಲಿಗೆರೆ, ವಿಜಯಕುಮಾರ್ ಮಲ್ಲನಾಯಕನಕಟ್ಟೆ, ರೂಪೇಶ್ ಗೊರವಾಲೆ ಹಾಗೂ ಜಯರಾಮು ಗಾಣದಾಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!