ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಹೋಬಳಿ ಚಿಕ್ಕಪಾಳ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ ಶುಕ್ರವಾರ ಬೆಳಗಿನ ಜಾವ ಸುಮಾರು 25ರಿಂದ 30 ವರ್ಷ ವಯಸ್ಸಿನ ಯುವಕ ತಲೆ ಒಡೆದುಕೊಂಡು ತೀವ್ರ ರಕ್ತ ಸ್ತ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದ ಲೇಟ್ ಪುಟ್ಟಸ್ವಾಮಿ ಆಚಾರಿ ಎಂಬುವವರ ಪುತ್ರ ಕಾರ್ತಿಕ್ (26) ಮೃತ ಯುವಕ.
ಕಾರ್ತಿಕ್ ತಲೆ ಒಡೆದುಕೊಂಡು ಅನುಮಾಸ್ಪದವಾಗಿ ಮೃತಪಟ್ಟ ಹಿನ್ನಲೆಯಲ್ಲಿ ಯಾರಾದರೂ ದುಷ್ಕರ್ಮಿಗಳು ತಲೆಗೆ ಬಲವಾಗಿ ಒಡೆದಿದು ಕೊಲೆ ಮಾಡಿರಬಹುದು ಎಂಬ ಅನುಮಾನ ಕೂಡ ವ್ಯಕ್ತವಾಗಿದೆ. ಕಾರ್ತಿಕ್ ಸಾವನ್ನಪ್ಪಿರುವ ಬಗ್ಗೆ ಗಮನಿಸಿದ ಸಾರ್ವಜನಿಕರು ಅರಕೆರೆ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಅರಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಸ್ ನಿಲ್ದಾಣದೊಳಗೆ ಮಲಗಿದ ಸ್ಥಿತಿಯಲ್ಲಿ ತಲೆಯಿಂದ ರಕ್ತ ಸೋರಿ ಕಾರ್ತಿಕ್ ಮೃತಪಟ್ಟಿದ್ದು, ದೇಹದ ಬೇರೆ ಎಲ್ಲೂ ಗಾಯವಾದ ಬಗ್ಗೆ ಕಂಡು ಬಂದಿರುವುದಿಲ್ಲ ಎಂದು ಪೋಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅರಕೆರೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.