Friday, September 20, 2024

ಪ್ರಾಯೋಗಿಕ ಆವೃತ್ತಿ

ಹೆಣ್ಣುಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಶಂಕೆ: ಕುಶಾಲನಗರದಲ್ಲಿ ಹೆಣವಾಗಿ ಪತ್ತೆಯಾದ ಮಂಡ್ಯದ ವೈದ್ಯ !

ಮಂಡ್ಯ ತಾಲ್ಲೂಕಿನ ಹಾಡ್ಯ-ಹುಳ್ಳೇನಹಳ್ಳಿ ಹೆಣ್ಣುಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದರು ಎನ್ನಲಾದ ಮಂಡ್ಯದ ವೈದ್ಯರೊಬ್ಬರು ಕುಶಾಲನಗರದಲ್ಲಿ ಶವವಾಗಿ ಶುಕ್ರವಾರ ಪತ್ತೆಯಾಗಿದ್ದಾರೆ.

ಈ ಹಿಂದೆ ಮಂಡ್ಯ ತಾಲ್ಲೂಕಿನ ಶಿವಳ್ಳಿಯಲ್ಲಿ ಆಯುರ್ವೇದಿಕ್ ವೈದ್ಯರಾಗಿ ಕ್ಲಿನಿಕ್ ನಡೆಸುತ್ತಿದ್ದ ಡಾ.ಸತೀಶ್ ಶವವಾಗಿ ಪತ್ತೆಯಾದ ವ್ಯಕ್ತಿ.

ಇತ್ತೀಚೆಗೆ ರಾಜ್ಯ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿದ್ದ ಮಂಡ್ಯದ ಹೆಣ್ಣುಭ್ರೂಣ ಹತ್ಯೆ ಪ್ರಕರಣದಲ್ಲಿ ಡಾ.ಸತೀಶ್ ಅವರ ಹೆಸರು ಕೇಳಿಬಂದಿದ್ದು, ಈ ಹಿಂದೆ ಮಂಡ್ಯದಲ್ಲಿ ನಡೆದಿದ್ದ ”ನಮ್ಮ ಮನೆ ನಮ್ಮ ಪಾಲಿ ಕ್ಲಿನಿಕ್” ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿಯೂ ಇವರು ಭಾಗಿಯಾಗಿದ್ದರು ಎನ್ನಲಾಗಿದೆ, ಈ ಪ್ರಕರಣ ವಿಚಾರಣೆ ಹಂತದಲ್ಲಿತ್ತು. ಆದರೆ ಇದ್ದಕ್ಕಿದ್ದಂತೆ ಡಾ.ಸತೀಶ್ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಕಾರಿನಲ್ಲಿ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಡಾ.ಸತೀಶ್ ಪ್ರಸ್ತುತ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಣಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯುರ್ವೇದಿಕ್ ವೈದ್ಯರಾಗಿ ಡಾ ಸತೀಶ್ ಕಾರ್ಯನಿರ್ವಹಿಸುತ್ತಿದ್ದರು. ಕುಶಾಲನಗರ ಗ್ರಾಮಾಂತರ  ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಡಾ.ಸತೀಶ್ ಸಾವು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

ಇತ್ತೀಚೇಗೆ ನುಡಿಕರ್ನಾಟಕ.ಕಾಂ ”ಹೆಣ್ಣುಭ್ರೂಣಹತ್ಯೆ ಪ್ರಕರಣದಲ್ಲಿ ಸ್ಥಳೀಯ ಆಯುರ್ವೇದಿಕ್ ವೈದ್ಯರ ಕೈವಾಡ” ಎಂದು ವರದಿ ಪ್ರಕಟಿಸಿದ್ದನ್ನು ಸ್ಮರಿಸಬಹುದು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!