Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕಾಂಗ್ರೆಸ್ ಮುಖಂಡ ಮುನಾವರ್ ಖಾನ್ ನಿಧನ

ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಮಾಜಿ ಅಧ್ಯಕ್ಷ ಮುನಾವರ್ ಖಾನ್ ಬುಧವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಲ್ಲಿ ಗುರುತಿಸಿಕೊಂಡಿದ್ದ ಇವರು, ಮಂಡ್ಯ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಮೃತರ ಪಾರ್ಥಿವ ಶರೀರವನ್ನು ಮಂಡ್ಯನಗರದ ಗುತ್ತಲು ಬಡಾವಣೆಯ ಸ್ವಗೃಹದಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ.

ನಾಳೆ (ಡಿ.28) ಮಧ್ಯಾಹ್ನ 3.30ಕ್ಕೆ ಮಂಡ್ಯ ನಗರದ ಹಿದ್ಗಾ ಮೈದಾನದಲ್ಲಿ ಇವರ ಮೃತದೇಹದ (ಸಂತೆ ಮಾಳದ ಹತ್ತಿರ ) ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!