ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಮದ್ದೂರು ಪಟ್ಟಣ ವ್ಯಾಪ್ತಿಯ ರೈಲು ಮಾರ್ಗದಲ್ಲಿ ಮಂಗಳವಾರ ಬೆಳಿಗ್ಗೆ ಜರುಗಿದೆ.
ಈ ಕುರಿತು ಮಾಹಿತಿ ನೀಡಿರುವ ರೈಲ್ವೇ ಪೊಲೀಸರು ಮದ್ದೂರಿನ ನಂಜಪ್ಪ ಕಲ್ಯಾಣ ಮಂಟಪದ ರೈಲ್ವೆ ಹಳಿ ಬಳಿ ಘಟನೆ ಜರುಗಿದೆ. ಕನಕಪುರ ಮೂಲಕ ನಾಗೇಶ್(35) ಎಂಬುವವರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮದ್ದೂರು ಪಟ್ಟಣದ ಶಿಂಷಾ ಬಾರ್ ನಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ, ಮಾನಸಿಕವಾಗಿ ನೊಂದು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮದ್ದೂರು ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.