ಶ್ರೀರಂಗಪಟ್ಟಣ ತಾಲೂಕು ಪಂಚಾಯಿತಿಯಲ್ಲಿರುವ ಶಾಸಕರ ಕಛೇರಿ ಆವರಣದಲ್ಲಿ ಮಾನ್ಯ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಿಂದ ವಿಕಲಚೇತನರಿಗೆ ಯಂತ್ರಚಾಲಿತ ವಾಹನವನ್ನು ಇಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಿತರಿಸಿದರು.
ವಿಕಲಚೇತನರಿಗೆ ಸಿಹಿ ಕೊಟ್ಟು ಮೊಟ್ಟ ವಾಹನದ ಕೀ ನೀಡುವ ಮೂಲಕ ವಿತರಣೆಗೆ ಚಾಲನೆ ನೀಡಿದರು.
ವಿಕಲಚೇತನರ ನೆರವಿಗೆ ನಾನು ಸದಾ ಸಿದ್ಧ.ವಾಹನಗಳನ್ನು ಬಹಳ ಎಚ್ಚರಿಕೆಯಿಂದ ಚಲಾಯಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.