Thursday, September 19, 2024

ಪ್ರಾಯೋಗಿಕ ಆವೃತ್ತಿ

ನಿರ್ಗತಿಕ ಮಹಿಳೆಯರಿಗೆ ”ವಾತ್ಸಲ್ಯ ಮನೆ” ಹಸ್ತಾಂತರ

ಕುಟುಂಬದ ಆಸರೆ ಇಲ್ಲದೇ ನಿರ್ಗತಿಕರಾಗಿರುವ ಇಬ್ಬರು ಮಹಿಳೆಯರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ನಿರ್ಮಿಸಿರುವ ಮನೆಗಳನ್ನು ಮಂಡ್ಯನಗರದ ನ್ಯೂ ತಮಿಳು ಕಾಲೋನಿಯಲ್ಲಿ ಶುಕ್ರವಾರ ಹಸ್ತಾಂತರಿಸಲಾಯಿತು.

ಮಂಡ್ಯ ನಗರಸಭೆ ಅಧ್ಯಕ್ಷ ಹೆಚ್.ಎಸ್.ಮಂಜು ಮನೆಗಳನ್ನು ಹಸ್ತಾಂತರಿಸಿ ಮಾತನಾಡಿ, ಯಾರೂ ಬೆಂಬಲವಾಗಿಲ್ಲದ ಮಹಿಳೆಯರಿಗೆ ತಲಾ 80 ಸಾವಿರ ರೂ.ವೆಚ್ಚದಲ್ಲಿ ಧರ್ಮಸ್ಥಳ ಸಂಸ್ಥೆಯು ಮನೆ ನಿರ್ಮಿಸಿಕೊಟ್ಟಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ತಗ್ಗಹಳ್ಳಿ ವೆಂಕಟೇಶ್, ಬಿಜೆಪಿ ಮುಖಂಡ ವಸಂತಕುಮಾರ್, ಧರ್ಮಸ್ಥಳ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಜಯರಾಂ ನೆಲ್ಲಿತಾಯಿ, ಯೋಜನಾಧಿಕಾರಿ ನಾರಾಯಣ್ ಭಟ್, ಶೋಭ ಮತ್ತಿತರರು ಉಪಸ್ಥಿತರಿದ್ದರು.

 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!