Wednesday, April 24, 2024

ಪ್ರಾಯೋಗಿಕ ಆವೃತ್ತಿ

ಸಿಎಂ ಬಗ್ಗೆ ನಿಂದನಾತ್ಮಕ ಮಾತನಾಡಿದ ಅಂಧ ಭಕ್ತನಿಗೆ ಬಿತ್ತು ಧರ್ಮದೇಟು

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ನಿಂದನಾತ್ಮಕ ಮಾತನಾಡಿ, ಸಿದ್ರಾಮುಲ್ಲಾ ಖಾನ್ ಎಂದು ಜರಿದಿದ್ದ ವ್ಯಕ್ತಿಯೊಬ್ಬ ಕೊನೆಗೆ ‘ನಾನು ಕುಡಿದು ಸಿದ್ದರಾಮಯ್ಯನವರ ಬಗ್ಗೆ ಮಾತನಾಡಿದ್ದೇನೆ’ ಎಂದು ಸಿದ್ದರಾಮಯ್ಯನವರ ಪ್ಲೆಕ್ಸಿನ ಮುಂದೆ ಮುಂಡಿಯೂರು ಕ್ಷಮೆ ಕೇಳಿರುವ ಘಟನೆ ನಡೆದಿದೆ.

ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು, ಇದನ್ನು ಗಂಭೀರವಾಗಿ ಪರಿಗಣಿಸಿದ ಸಿದ್ದರಾಮಯ್ಯನವರ ಅಭಿಮಾನಿಗಳು ಕಿಡಿಗೇಡಿನ ತಕ್ಕ ಪಾಠ ಕಲಿಸಿದ್ದಾರೆಂದು ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಟ್ಟ ಶಬ್ದಗಳಿಂದ ನಿಂದಿಸಿದ ಅಂಧ ಭಕ್ತನಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನದ ಜೊತೆಗೆ ಬರ್ನಲ್ ಭಾಗ್ಯವನ್ನು ಕೊಟ್ಟ ಅಭಿಮಾನಿಗಳಿಗೆ ಧನ್ಯವಾದಗಳು ಎಂದು ಕೆಲವರು ಟ್ವೀಟ್ ನಲ್ಲಿ ಬರೆದುಕೊಂಡು ಸಿದ್ದರಾಮಯ್ಯ ಅವರ ಅಭಿಮಾನಿಗಳ ಕಾರ್ಯವನ್ನು ಶ್ಲಾಘಿಸಿದ್ದಾರೆ.

“>

ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಈ ಕಿಡಿಗೇಡಿಯನ್ನು ಪತ್ತೆ ಹಚ್ಚಿ, ಎಳೆತಂದು ಸಿದ್ದರಾಮಯ್ಯನವರ ಕ್ಷಮೆ ಕೇಳುವಂತೆ ಮಾಡಿದ್ದಾರೆ. ಆತ ಕ್ಷಮೆ ಕೇಳುವಾಗ ನಾನು ಕುಡಿದು ಈ ರೀತಿ ಮಾತನಾಡಿದ್ದೇನೆ, ನನ್ನಿಂದ ತಪ್ಪಾಗಿದೆ ಎಂದು ಕ್ಷಮೆ ಕೇಳಿದ್ದಾನೆ.

“>

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!