ಮೇಲುಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿದ ಮಂಡ್ಯ ತಾಲೂಕಿನ ಮೊಡಚಾಕನಹಳ್ಳಿ ಗ್ರಾಮದಲ್ಲಿ ಆಕಸ್ಮಿಕವಾಗಿ ಕಬ್ಬಿನ ಗದ್ದೆಗೆ ತಗುಲಿದ್ದ ಬೆಂಕಿ ನಂದಿಸಲು ಹೋಗಿ ಮೃತಪಟ್ಟ ರೈತ ಮಹಾಲಿಂಗಯ್ಯ ಮನೆಗೆ ಕಾಂಗ್ರೆಸ್ ಮುಖಂಡರು ಬುಧವಾರ ಭೇಟಿ ಕೊಟ್ಟು ಅವರ ಪತ್ನಿ ಸರೋಜಮ್ಮ ಮತ್ತು ಮಕ್ಕಳಿಗೆ ಸಾಂತ್ವಾನ ಹೇಳಿದರು.
ರೈತ ಮಹಾಲಿಂಗಯ್ಯ ಮನೆಗೆ ಭೇಟಿ ಕೊಟ್ಟ ಕಾಂಗ್ರೆಸ್ ಮುಖಂಡ ಎಚ್.ತ್ಯಾಗರಾಜು, ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್ ಅವರು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ 20 ಸಾವಿರ ಆರ್ಥಿಕ ನೆರವು ನೀಡಿದರು.
ಈ ಸಂದರ್ಭದಲ್ಲಿ ಎಚ್.ಮಂಜುನಾಥ್ ಮಾತನಾಡಿ, ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೊಡಚಾಕನಹಳ್ಳಿ ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ತಗುಲಿದ್ದ ಬೆಂಕಿಯನ್ನು ನಿಂದಿಸಲು ಹೋಗಿ ಕಬ್ಬಿನ ಗದ್ದೆಯ ಮಧ್ಯೆದಲ್ಲಿ ಸಿಲುಕಿ ಹೊರಬರಲಾಗಿದೆ ಬೆಂಕಿಗೆ ಆಹುತಿಯಾಗಿದ್ದರು. ಆ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿ ಕೈಲಾದರ ಆರ್ಥಿಕ ನೆರವು ನೀಡಿದ್ದೇವೆ ಎಂದರು.
ನಿಜಕ್ಕೂ ಇದೊಂದು ದುರಂತ ಘಟನೆ, ಇಂತಹ ಘಟನೆಗಳು ನಡೆಯಬಾರದು. ಸರಕಾರಗಳು ಇಂತಹ ಘಟನೆಯನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ನೆರವು ನೀಡಬೇಕು. ಇಂತಹ ಘಟನೆಗಳು ಮರುಕಳುಹಿಸದಂತೆ ಎಚ್ಚರವಹಿಸಬೇಕು. ಮೃತ ರೈತ ಮಹಾಲಿಂಗಯ್ಯ ಅವರ ಕುಟುಂಬ ತುಂಬ ಬಡವರಾಗಿದ್ದು ಜೀವನ ನಡೆಸುವುದಕ್ಕೂ ಸಾಕಷ್ಟು ತೊಂದರೆಯಾಗಿತ್ತು. ಆ ಹಿನ್ನೆಲೆಯ ಆ ಕುಟುಂಬ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದೇವೆ, ಕಾಂಗ್ರೆಸ್ ಪಕ್ಷ ಸದಾ ರೈತ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ನೀಡುವ ಪಕ್ಷವಾಗಿದೆ ಎಂದರು.
ಎಚ್.ತ್ಯಾಗರಾಜು ಮಾತನಾಡಿ, ಬೆಂಕಿ ಅನಾಹುತದಲ್ಲಿ ಮೃತಪಟ್ಟ ಮಹಾಲಿಂಗಯ್ಯ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿ ಆ ಕುಟುಂಬಕ್ಕೆ ಆರ್ಥಿಕ ನೆರವು ನೀಡಲಾಗಿದ್ದು, ಸರಕಾರ ಹೆಚ್ಚಿನ ಮಟ್ಟದಲ್ಲಿ ನೆರವು ನೀಡಬೇಕು ಎಂದು ಒತ್ತಾಯಿಸಿದರು.
ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಮುಖಂಡ ಎಚ್.ತ್ಯಾಗತಾಜು, ನಾಗರಾಜ್, ಮುಂಖಡರಾದ ಎಂ.ಎಲ್.ಸುಕೇಶ್, ಶಂಕರ್, ಎಂ.ಎಲ್.ನಾಗರಾಜ್, ಎಂ.ಎಲ್.ಲಿಂಗೇಗೌಡ, ಮೇಲುಕೋಟೆ ಬ್ಲಾಕ್ ಯುವ ಕಾಂಗ್ರೇಸ್ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಹಲವರು ಹಾಜರಿದರು.