Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಇನ್ನರ್ ವೀಲ್ ಸಂಸ್ಥೆಯಿಂದ ಆಹಾರ ಕಿಟ್ ವಿತರಣೆ

ಪ್ರಧಾನಮಂತ್ರಿ ಟಿಬಿ ಮುಕ್ತ ಭಾರತ ಅಭಿಯಾನದ ಅಂಗವಾಗಿ ಕ್ಯಾತುಂಗೆರೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಐದು ಟಿಬಿ ರೋಗಿಗಳಿಗೆ ಇನ್ನರ್ ವೀಲ್ ಸಂಸ್ಥೆಯ ವತಿಯಿಂದ ಆಹಾರ ಕಿಟ್ ಗಳನ್ನು ವಿತರಿಸಲಾಯಿತು.

ಕ್ಷಯರೋಗ ಗುಣವಾಗಲು ಚಿಕಿತ್ಸೆ ಜೊತೆಗೆ ಆಹಾರ ಬಹಳ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ರೋಗಿಗಳನ್ನು ದತ್ತು ಪಡೆದು ಚಿಕಿತ್ಸೆ ಅವಧಿ ಮುಗಿಯುವವರೆಗೆ ಪ್ರತಿ ಮಾಹೆ ಆಹಾರ ಕಿಟ್ ಗಳನ್ನು ನೀಡಲಾಗುತ್ತದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೆ. ಮೋಹನ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಡಾ. ಸೋಮಶೇಖರ್, ಜಿಲ್ಲಾ ಸರ್ವ ಶಿಕ್ಷಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್, ತಾಲೂಕು ಆರೋಗ್ಯಾಧಿಕಾರಿ ಡಾ.ಜವರೇಗೌಡ ಹಾಗೂ ಆರೋಗ್ಯದ ಕೇಂದ್ರ ಸಿಬ್ಬಂದಿಗಳನ್ನು ಸೇರಿದಂತೆ ಇನ್ನರ್ ವೀಲ್ ಸಂಸ್ಥೆಯ ಅಧ್ಯಕ್ಷರಾದ ಸುಮಾ ಅನಂತ್, ಉಪಾಧ್ಯಕ್ಷರಾದ ಪುಷ್ಪಲತಾ ಪುಟ್ಟಸ್ವಾಮಿ, ಕಾರ್ಯದರ್ಶಿಯಾದ ವಸಂತ ನಂಜೇಗೌಡ ಮತ್ತು ಉಪಾಧ್ಯಕ್ಷರಾದ ರಶ್ಮಿ ವಿಜಯಕುಮಾರ್ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!