ಮಳವಳ್ಳಿ ತಾಲೂಕಿನ ತಮ್ಮಡಹಳ್ಳಿ ಗ್ರಾಮದ ಮಾರಮ್ಮ ದೇವಸ್ಥಾನ ಆವರಣದಲ್ಲಿ ಡಾ. ಪುನೀತ್ ರಾಜಕುಮಾರ್ ಅವರ 49 ನೇ ಹುಟ್ಟುಹಬ್ಬ ಆಚರಿಸಿ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪೆನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ ಮಾತನಾಡಿ, ಡಾ.ರಾಜಕುಮಾರ್ ಒಬ್ಬ ಪ್ರತಿಭಾವಂತ ಕಲಾವಿದರು, ಅವರ ಮಗ ಪುನೀತ್ ರಾಜ್ ಕುಮಾರ್ ಅವರಿಗೆ ನಟನೆ ರಕ್ತಗತವಾಗಿತ್ತು. ಅಪ್ಪು ಅಜರಾಮರ ಎನ್ನುವಂತೆ ಅಪ್ಪು ಹೆಸರಿನಲ್ಲಿ ಹುಟ್ಟುಹಬ್ಬದಂದು ನಡೆಯುವ ಸಾಮಾಜಿಕ ಕಾರ್ಯಗಳಿಗೆ ಲೆಕ್ಕವಿಲ್ಲ. ಅವರು ಕನ್ನಡಿಗರಿಗೆ ಸ್ಪೂರ್ತಿಯ ಚಿಲುಮೆ ಆಗಿದ್ದಾರೆಮ ಬಹಳಷ್ಟು ಶಾಲೆ ಮಕ್ಕಳಿಗೆ ಅಲ್ಲದೇ ವಿವಿಧ ಕ್ಷೇತ್ರಗಳಲ್ಲಿರುವವರಿಗೆ ಸಹಾಯ ಮಾಡಿದ್ದಾರೆ ಎಂದು ಸ್ಮರಿಸಿದರು.
ಡಾ.ಪುನೀತ್ ರಾಜಕುಮಾರ್ ಹೆಸರಿನಲ್ಲಿ ರಾಜ್ಯ ಸರ್ಕಾರ ಇತ್ತೀಚಿನ ದಿನಗಳಲ್ಲಿ ಮಂಡಿಸಿದ ಬಜೆಟ್ ನಲ್ಲಿ ಪುನೀತ್ ಹೃದಯ ಜ್ಯೋತಿ ಕಾರ್ಯಕ್ರಮವನ್ನು ಕೆಲವು ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಅನುಷ್ಠಾನ ತಂದಿರುವುದು ಸಂತಸದ ವಿಷಯ. ಆದ್ದರಿಂದ ರಾಜ್ಯ ಸರ್ಕಾರಕ್ಕೆ ಎಲ್ಲಾ ಅಭಿಮಾನಿಗಳ ಕಡೆಯಿಂದ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು
ಇದೇ ವೇಳೆಯಲ್ಲಿ ಅಭಿಮಾನಿಗಳಾದ ಅಂಗಡಿ ಸಿದ್ದು, ಶಿವಕುಮಾರ್, ರವಿ, ಕುಮಾರ, ಜವರಾಯಿ ಸೇರಿದಂತೆ ಇತರರು ಹಾಜರಿದ್ದರು.