Thursday, September 19, 2024

ಪ್ರಾಯೋಗಿಕ ಆವೃತ್ತಿ

ಅ.22ಕ್ಕೆ ಜಿಲ್ಲಾ ಮಟ್ಟದ ಪತ್ರಕರ್ತರ ಕಾರ್ಯಾಗಾರ

ಮಂಡ್ಯ ಜಿಲ್ಲಾ ಜರ್ನಲಿಸ್ಟ್ ಕ್ಲಬ್ ವತಿಯಿಂದ ಅ.22ರಂದು ಬೆಳಿಗ್ಗೆ10.30ಕ್ಕೆ ಮಂಡ್ಯನಗರದ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪತ್ರಕರ್ತರ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಕಬ್ಬನಹಳ್ಳಿ ಶಂಭು ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಸಮಾರಂಭ ಉದ್ಘಾಟಿಸುವರು. ಮಂಡ್ಯ ಜಿಲ್ಲಾ ಜರ್ನಲಿಸ್ಟ್ ಕ್ಲಬ್ ಅಧ್ಯಕ್ಷ ಕಬ್ಬನಹಳ್ಳಿ ಶಂಭು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲಾ ಭಾಗವಹಿಸುವರು ಎಂದರು.

ವಿಶೇಷ ಆಹ್ವಾನಿತರಾಗಿ ಕರ್ನಾಟಕ ಸಂಪಾದಕರ ಮತ್ತು ವರದಿಗಾರರ ಸಂಘದ ರಾಜ್ಯಾಧ್ಯಕ್ಷ ಕಲಾವಿದ ವಿಷ್ಠು, ಪ್ರಾಂಶುಪಾಲ ಡಾ.ಆರ್.ದಶರಥ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಸಿ.ಮಂಜುನಾಥ್ ಭಾಗವಹಿಸುವರು ಎಂದು ಹೇಳಿದರು.

ಗೋಷ್ಠಿ1ರಲ್ಲಿ ಹಿರಿಯ ಪತ್ರಕರ್ತ ಡಾ.ಜಗದೀಶ್ ಕೊಪ್ಪ ಮಂಡ್ಯ ಜಿಲ್ಲೆ ಪತ್ರಿಕೋದ್ಯಮ ಸಾಧಕ- ಬಾಧಕಗಳು ಕುರಿತು ವಿಷಯ ಮಂಡನೆ ಮಾಡುವರು. ನುಡಿಭಾರತಿ ಸಂಪಾದಕ ಎಲ್.ಬಸವೇಗೌಡ ಅಧ್ಯಕ್ಷತೆ ವಹಿಸುವರು. ಕಂದಾಯ ದರ್ಪಣ ಪತ್ರಿಕೆ ಸಂಪಾದಕ ರಾಮಕಷ್ಣ ಅತಿಥಿಗಳಾಗಿ ಪಾಲ್ಗೊಳ್ಳುವರು. ಗೋಷ್ಠಿ2ರಲ್ಲಿ ರಾಜ್ಯ ಮಾಧ್ಯಮ ಅಕಾಡೆಮಿ ಸದಸ್ಯ ಬದ್ರುದ್ದೀನ್ ಕೆ.ಮಾಣಿ ಮಾಧ್ಯಮ ಲೋಕದಲ್ಲಿ ಡಿಜಿಟಲ್ ಕ್ರಾಂತಿಯ ಸವಾಲುಗಳು ಕುರಿತು ವಿಷಯ ಮಂಡನೆ ಮಾಡಲಿದ್ದು, ಅಡ್ವೈಸರ್ ಮಾಸ ಪತ್ರಿಕೆ ಸಂಪಾದಕ ಸಿ.ಬಸವರಾಜು ಅಧ್ಯಕ್ಷತೆ ವಹಿಸುವರು. ಪ್ರಜಾಸತ್ಯ ಪತ್ರಿಕೆ ಸಂಪಾದಕ ದ.ಕೋ.ಹಳ್ಳಿ ಚಂದ್ರಶೇಖರ್ ಅತಿಥಿಯಾಗಿ ಭಾಗವಹಿಸುವರು ಎಂದರು.

ಸಂಜೆ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಸಮಾರೋಪ ಭಾಷಣ ಮಾಡುವರು. ಕ್ಲಬ್ ನ ಅಧ್ಯಕ್ಷ ಕಬ್ಬನಹಳ್ಳಿ ಶಂಭು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಸಿಇಓ ಶಾಂತ ಎಲ್.ಹುಲ್ಮನಿ, ನಗರಸಭಾಧ್ಯಕ್ಷ ಹೆಚ್.ಎಸ್.ಮಂಜು, ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘದ ಅಧ್ಯಕ್ಷ ಎಂ.ಶಿವಕುಮಾರ್ ಭಾಗವಹಿಸುವರು ಎಂದರು.

ಗೋಷ್ಠಿಯಲ್ಲಿ ಹಿರಿಯ ಪತ್ರಕರ್ತರಾದ ಕೌಡ್ಲೆ ಚನ್ನಪ್ಪ, ಎಲ್.ಎಲ್.ಬಸವೇಗೌಡ, ರಾಮಕೃಷ್ಣ, ಸಿ.ಬಸವರಾಜು, ಗುರುಬಸವಯ್ಯ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!