Friday, September 20, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ 79ನೇ ಜಯಂತ್ಯೋತ್ಸವ

ಒಕ್ಕಲಿಗರ ಸೇವಾ ಟ್ರಸ್ಟ್ ಮಂಡ್ಯ, ಅಖಿಲ ಕನಾ೯ಟಕ ಒಕ್ಕಲಿಗರ ಸಂಘ ಮಂಡ್ಯ ಜಿಲ್ಲಾ ಘಟಕ ಇವರ ಸಂಯುಕ್ತಾಶ್ರದಲ್ಲಿ ಪದ್ಮಭೂಷಣ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ 79ನೇ ಜಯಂತೋತ್ಸವ ಹಾಗೂ ಡಾ. ನಿಮ೯ಲಾನಂದನಾಥ ಸ್ವಾಮೀಜಿ ಅವರಿಗೆ 10 ನೇ ವರ್ಷದ ಪಟ್ಟಾಭೀಷೇಕ ಕಾಯ೯ಕ್ರಮವು ಫೆ.21ರಂದು ಮಂಡ್ಯದ ರೈತ ಸಭಾಂಗಣದಲ್ಲಿ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಒಕ್ಕಲಿಗರ ಸೇವಾ ಟ್ರಸ್ಟ್ ಜಿಲ್ಲಾಧ್ಯಕ್ಷ ಕೆ.ಸಿ. ರವೀಂದ್ರ ಮನವಿ ಮಾಡಿದರು.

ಮಳವಳ್ಳಿ ಪಟ್ಟಣದಲ್ಲಿ ಕಾಯ೯ಕ್ರಮದ ಪೂವ೯ಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮುದಾಯವನ್ನು ಒಗ್ಗೂಡಿಸಿ ಜಿಲ್ಲಾ ಮಟ್ಟದಲ್ಲಿ ಕಾಯ೯ಕ್ರಮವನ್ನು ವಿಶೇಷ ರೀತಿಯಲ್ಲಿ ಆಯೋಜನೆ ಮಾಡಲಾಗುತ್ತಿದೆ, ಬಾಲಗಂಗಾಧರನಾಥ ಸ್ವಾಮೀಜಿಯವರ ಸ್ಮರಣೆ ಜೊತೆಗೆ ವೈದ್ಯಕೀಯ ಸೇವೆಯಲ್ಲಿ ಅಪಾರ ಸೇವೆ ಸಲ್ಲಿಸಿರುವ ಡಾ.ಮಂಜುನಾಥ್ ಅವರನ್ನು ಅಭಿನಂದಿಸುವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಅಖಿಲ ಕನಾ೯ಟಕ ಒಕ್ಕಲಿಗರ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಸಿ.ಜೆ ಸುಜಾತಕೃಷ್ಣ ಮಾತನಾಡಿ, ಒಕ್ಕಲಿಗರ ಸಂಘದ ಎಲ್ಲಾ ಸಂಘಟನೆಗಳ ಜೊತೆಗೂಡಿ ಸಂಕ್ರಾಂತಿ ಸುಗ್ಗಿ ಸಂಭ್ರಮ, ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ, ಹೃದಯ ಸಂಬಂಧಿಸಿದ ಖಾಯಿಲೆಗಳಿಗೆ ಉತ್ತಮ ಚಿಕಿತ್ಸೆ ನೀಡಿ ಸಾವಿರಾರು ಮಂದಿಯ ಜೀವ ಉಳಿಸಿದ ಡಾ.ಮಂಜುನಾಥ್ ಅವರಿಗೆ ಅಭಿನಂದಿಸುವುದರ ಮೂಲಕ ಜಿಲ್ಲೆಯ ಅಭಿಮಾನವನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಹಮ್ಮಿಕೊಂಡಿರುವ ಸಮಾರಂಭಕ್ಕೆ ಪಕ್ಷಾತೀತವಾಗಿ ಹಾಗೂ ಜತ್ಯಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಒಕ್ಕಲಿಗರ ಸೇವಾ ಟ್ರಸ್ಟ್ ಗೌರವಾಧ್ಯಕ್ಷ ತಮ್ಮಯ್ಯ, ರಾಜ್ಯ ಸಂಚಾಲಕ ಕೃಷ್ಣೇಗೌಡ, ಮುಖಂಡರಾದ ಜವರೇಗೌಡ, ಜಯಮ್ಮ, ತಾಲ್ಲೂಕು ಅಧ್ಯಕ್ಷ ಕೆ.ಸಿ ನಾಗೇಗೌಡ, ಕುಮಾರ್, ಮುದ್ದುಮಲ್ಲು ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!