Thursday, September 19, 2024

ಪ್ರಾಯೋಗಿಕ ಆವೃತ್ತಿ

ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಣೆ

ಮಳವಳ್ಳಿ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.

ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪರ್ಚನೆ ಮಾಡಿದ ನಂತರ ಕಾಂಗ್ರೆಸ್ ಹಿರಿಯ ಮುಖಂಡ ಜಯರಾಜು ಮಾತನಾಡಿ, ನಾಡಿಗೆ ಬೆಳಕು ನೀಡಿದ ಅಂಬೇಡ್ಕರ್ ರವರು ಪ್ರತಿಯೊಬ್ಬರ ದಾರಿ ದೀಪವಾಗಿದ್ದಾರೆ, ಅವರ ಅಪಾರ ಜ್ಞಾನದಿಂದಾಗಿ ಹಲವಾರು ಪದವಿಗಳನ್ನು ಪಡೆಯುವುದರ ಜೊತೆಗೆ ವಿಶ್ವಜ್ಞಾನಿಯಾಗಿ ಹೊರ ಹೊಮ್ಮಿದ್ದಾರೆ, ಅಂಬೇಡ್ಕರ್ ಅವರು ಪ್ರತಿಯೊಬ್ಬರಿಗೂ ಸ್ಪೂರ್ತಿಯ ನಾಯಕರಾಗಿದ್ದಾರೆಂದು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜು, ಕಾಂಗ್ರೆಸ್ ಮುಖಂಡರಾದ ಮಾರ್ಕಾಲು ಸಿ. ಮಾಧು, ಶಿವಮಾದೇಗೌಡ, ಕೃಷ್ಣಮೂರ್ತಿ, ಜಗದೀಶ್, ವೇದಮೂರ್ತಿ, ಮಹೇಶ್, ಮಹದೇವು, ಸಂತೋಷ್ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!