Monday, September 23, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸೆ.25ಕ್ಕೆ ಡಾ.ಹೆಚ್.ಡಿ ಚೌಡಯ್ಯ ಪ್ರಶಸ್ತಿಗಳ ಪ್ರದಾನ

ಮಂಡ್ಯದ ಜನತಾ ಶಿಕ್ಷಣ ಟ್ರಸ್ಟ್ ವತಿಯಿಂದ ಡಾ.ಹೆಚ್.ಡಿ.ಚೌಡಯ್ಯ ಅವರ 97ನೇ ಜನ್ಮದಿನಾಚರಣೆ ಹಾಗೂ 2024ನೇ ಸಾಲಿನ ರಾಜ್ಯಮಟ್ಟದ ಡಾ.ಹೆಚ್ ಡಿ ಚೌಡಯ್ಯ ಸಮಾಜ ಸೇವೆ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಪ್ರಶಸ್ತಿಗಳ ಪ್ರದಾನ ಹಾಗೂ ಪ್ರತಿಭಾ ವಿದ್ಯಾರ್ಥಿ ಪುರಸ್ಕಾರ ಸಮಾರಂಭವನ್ನು ಸೆ.25ರಂದು ಬೆಳಗ್ಗೆ 10.30 ಗಂಟೆಗೆ ಪಿ ಇ ಎಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದ ಕೆ.ವಿ.ಶಂಕರಗೌಡ ತರಬೇತಿ ಮತ್ತು ಉದ್ಯೋಗ ಕೇಂದ್ರದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟಿನ ಧರ್ಮದರ್ಶಿ ಡಾ.ರಾಮಲಿಂಗಯ್ಯ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024ನೇ ಸಾಲಿನ ರಾಜ್ಯಮಟ್ಟದ ಡಾ.ಹೆಚ್ .ಡಿ. ಚೌಡಯ್ಯ ಸಮಾಜ ಸೇವಾ ಪ್ರಶಸ್ತಿಗೆ ಕೋಲಾರದ ಚಾಮರಹಳ್ಳಿ ಜೀವ ಸಂಜೀವನ ನ್ಯಾಚುರಲ್ ಲೈಫ್ ಸಂಸ್ಥಾಪಕ ಆರ್ ರಾಜಶೇಖರ್, ಡಾ.ಹೆಚ್‌.ಡಿ. ಚೌಡಯ್ಯ ಗ್ರಾಮೀಣ ಅಭಿವೃದ್ಧಿ ಪ್ರಶಸ್ತಿಗೆ ಮಂಡ್ಯ ತಾಲೂಕಿನ ಉಮ್ಮಡಹಳ್ಳಿಯ ಸರ್ಕಾರಿ ಪ್ರೌಢಶಾಲೆ ಹಾಗೂ ಡಾ.ಹೆಚ್.ಡಿ ಚೌಡಯ್ಯ ಕೃಷಿ ಪ್ರಶಸ್ತಿಗೆ ಮದ್ದೂರು ತಾಲೂಕಿನ ಮಲ್ಲನಕುಪ್ಪೆ ಗ್ರಾಮದ ಸಮಗ್ರ ಸಾವಯವ ಕೃಷಿಕ ಶಿವರಾಮೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು .

ಇದೇ ಸಾಲಿನ ಪ್ರತಿಭಾ ವಿದ್ಯಾರ್ಥಿ ಪ್ರಶಸ್ತಿಗೆ ಹೊಳಲು ಸರ್ಕಾರಿ ಪ್ರೌಢಶಾಲೆಯ ಎಚ್ ಕೆ ಸಂಜನಾ, ಅದೇ ಗ್ರಾಮದ ಎಚ್ಎನ್ ಧನುಷ್ , ಶ್ರೀವೆಂಕಟೇಶ್ವರ ವಿದ್ಯಾನಿಕೇತನ ಪ್ರೌಢಶಾಲೆಯ ಎನ್ ಚಂದನ, ಎಚ್ ಪಿ ಕಿಶೋರ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಅಂದು ಬೇಬಿ ಮಠದ ಪೀಠಾಧಿಪತಿ ಶ್ರೀತ್ರಿನೇತ್ರ ಮಹಾಂತ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದು, ಜನತಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ ಎಸ್ ವಿಜಯಾನಂದ ಅಧ್ಯಕ್ಷತೆ ವಹಿಸುವರು. ಇದೆ ಸಂದರ್ಭದಲ್ಲಿ ಕಾರ್ಯದರ್ಶಿ ಎಸ್.ಎಲ್. ಶಿವಪ್ರಸಾದ್ ಧರ್ಮದರ್ಶಿ ಹೆಚ್ ಸಿ ಮೋಹನ್ ಕುಮಾರ್ ಉಪಸ್ಥಿತರಿರುವರು ಎಂದರು.

ಗೋಷ್ಠಿಯಲ್ಲಿ ಪಿಟಿಇ ಸಂಸ್ಥೆಯ ಕಾರ್ಯದರ್ಶಿ ಎಸ್ ಹೆಚ್ ಶಿವಪ್ರಸಾದ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!