ಕಾಲೇಜು ಹಂತದಲ್ಲಿ ನಿಮ್ಮಗಳ ಭವಿಷ್ಯವನ್ನು ರೂಪಿಸಿಕೊಳ್ಳುವ ಹಂತ ಅದನ್ನು ಸರಿಯಾಗಿ ಬಳಸಿಕೊಂಡು ಉತ್ತಮ ವಿದ್ಯಾರ್ಥಿಗಳಾಗಿ ಎಂದು ಸಾಹಿತಿ ಡಾ.ಹೆಚ್.ಎಸ್ ಮುದ್ದೇಗೌಡ ತಿಳಿಸಿದರು.
ಮಳವಳ್ಳಿ ಪಟ್ಟಣದ ಶಾಂತಿ ಸಮುದಾಯಭವನದಲ್ಲಿ ಶಾಂತಿ ಪದವಿ ಪೂರ್ವ ಕಾಲೇಜು ವತಿಯಿಂದ ನಡೆದ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಂಡ್ಯಜಿಲ್ಲೆ ಇತ್ತೀಚಿನ ದಿನಗಳಲ್ಲಿ ಶಿಕ್ಷಣದಲ್ಲಿ ಪ್ರಗತಿ ಕಾಣುತ್ತಿದೆ ಜೊತೆಗೆ ಎಂದರು.
ಕಾರ್ಯಕ್ರಮದಲ್ಲಿ ಡಾ ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಡಾ ದಡದಪುರಶಿವಣ್ಣ, ಶಾಂತಿ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ನಾಗಮಣಿ ನಾಗೇಗೌಡ, ಕಾರ್ಯದರ್ಶಿ ಎಂ.ಹೆಚ್ ಕೆಂಪಯ್ಯ, ತಿಮೇಗೌಡ, ಮಹದೇವಸ್ವಾಮಿ, ಪುಟ್ಟ ರಾಜು, ಪ್ರಾಂಶುಪಾಲರಾದ ಶಿವಪ್ಪ, ವೇದಮೂರ್ತಿ ಸೇರಿದಂತೆ ಹಲವರು ಇದ್ದರು.