Tuesday, May 21, 2024

ಪ್ರಾಯೋಗಿಕ ಆವೃತ್ತಿ

ಸೇತುವೆ ಕಾಮಗಾರಿ ವೀಕ್ಷಣೆ ಮಾಡಿದ ಶಾಸಕ ಡಾ.ಕೆ.ಅನ್ನದಾನಿ

ಮಳವಳ್ಳಿ ಪಟ್ಟಣದ ಗಂಗಾಮತ ಬೀದಿಯ ಗಂಗಾ ಟಾಕೀಸ್ ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ಸೇತುವೆ ಕಾಮಗಾರಿಯನ್ನು ಶಾಸಕ ಡಾ.ಕೆ.ಅನ್ನದಾನಿ ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರಿಗೆ ಅನುಕೂಲಮಾಡಿಕೊಡುವ ಹಿನ್ನೆಲೆಯಲ್ಲಿ ಸೇತುವೆ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಸಿಡಿ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಈ ವಾರ್ಡ್ಗಳ ಮುಖಂಡರು ಸಿಡಿಹಬ್ಬದ ಮುಂಚಿತವಾಗಿ ಕಾಮಗಾರಿಯನ್ನು ಮುಗಿಸಬೇಕೆಂದು ಒತ್ತಾಯ ಮಾಡಿಕೊಂಡಿದ್ದರು. ಖುದ್ದಾಗಿ ನಾನೇ ಆಗಮಿಸಿ ಕಾಮಗಾರಿ ಪರಿಶೀಲನೆ ನಡೆಸುತ್ತಿದ್ದೇನೆ, ಅತಿಶೀಘ್ರದಲ್ಲಿಯೇ ದಂಡಿನ ಮಾರಮ್ಮ ಹಬ್ಬಕ್ಕೂ ಮುಂಚಿತವಾಗಿ ಕಾಮಗಾರಿಯನ್ನು ಅಂತಿಮಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿಕೊಡಲಾಗುವುದೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ರಾಧನಾಗರಾಜು, ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ, ಉಪಾಧ್ಯಕ್ಷ ಎಂ.ಟಿ ಪ್ರಶಾಂತ್, ಯಜಮಾನ್ ಪ್ರಭು, ಪುರಸಭೆ ಮುಖ್ಯಾಧಿಕಾರಿ ಹರಿಪ್ರಸಾದ್, ಇಂಜಿನೀಯರ್ ಪುಟ್ಟಯ್ಯ, ಗಂಗಪರಮೇಶ್ವರಿ ಸೊಸೈಟಿ ಅಧ್ಯಕ್ಷ ಮಹೇಶ್, ನಂಜುಂಡ ಗುಂಡ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!