ಮಂಡ್ಯ ಜಿಲ್ಲಾ ನೂತನ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ.ಪಿ.ಸಿ ಜಾಫರ್ ಅವರು ನೇಮಕವಾಗಿದ್ದಾರೆ. ಜಾಫರ್ ಅವರು ಈ ಹಿಂದೆ ಮಂಡ್ಯ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಅನಂತರ ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಉನ್ನತ ಆಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.
ಡಾ.ಪಿ.ಸಿ ಜಾಫರ್ ಅವರನ್ನು ಐಎಂಎ ಅಧ್ಯಕ್ಷ ಹಾಗೂ ನಿವೃತ್ತ ಡಿಹೆಚ್ಒ ಡಾ.ಟಿ.ಎನ್ ಮರೀಗೌಡ ಅವರು ನೆನಪಿನ ಕಾಣಿಕೆ ನೀಡಿ ಮಂಡ್ಯ ಜಿಲ್ಲೆಗೆ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್, ಜಿ.ಪಂ.ಸಿಇಒ ಶೇಕ್ ತನ್ವೀರ್ ಆಸಿಫ್, ಡಾ.ಬಿ.ಎಸ್ ಕಕ್ಕಿಲ್ಲಾಯ, ಡಾ.ಪಿ ಎಂ ಜಗದೀಶ್ ಕುಮಾರ್ ಅವರು ಡಾ.ಪಿ.ಸಿ.ಜಾಫರ್ ಅವರನ್ನು ಅಭಿನಂದಿಸಿದರು.