Friday, September 20, 2024

ಪ್ರಾಯೋಗಿಕ ಆವೃತ್ತಿ

ಡಾ.ಶಂಕರೇಗೌಡರ ಸಹೋದರ ಕೃಷ್ಣಪ್ಪ ನಿಧನ

ಪ್ರಖ್ಯಾತ ಚರ್ಮರೋಗ ತಜ್ಞ ಡಾ.ಎಸ್. ಶಂಕರೇಗೌಡ ಅವರ ಸಹೋದರ ಕೃಷ್ಣಪ್ಪ (72) ಅವರು ಹೃದಯಾಘಾತದಿಂದ ಶುಕ್ರವಾರ ಬೆಳಗ್ಗೆ ತಾಲ್ಲೂಕಿನ ಶಿವಳ್ಳಿಗ್ರಾಮದ ತಮ್ಮ ಸ್ವಗೃಹದಲ್ಲಿ ನಿಧನರಾದರು.

ಕಳದೆ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಇತ್ತೀಚೆಗಷ್ಟೇ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಮುಂಜಾನೆ ಹೃದಯಾಘಾತಕ್ಕೊಳಗಾಗಿ ಮನೆಯಲ್ಲಿ ನಿಧನರಾಗಿದ್ದಾರೆ.

ಪತ್ನಿ, ಮೂವರು ಪುತ್ರಿಯರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಗ್ರಾಮದ ಅವರ ತೋಟದಲ್ಲಿ ಮಧ್ಯಾಹ್ನ ಮೃತರ ಅಂತ್ಯಕ್ರಿಯೆ ನಡೆಯಿತು.

ಶಾಸಕ ಸಿ.ಎಸ್. ಪುಟ್ಟರಾಜು, ಮಾಜಿ ಶಾಸಕರಾದ ಜಿ.ಬಿ.ಶಿವಕುಮಾರ್, ಎಚ್.ಪಿ. ರಾಮು, ರಮೇಶ್ ಬಂಡಿಸಿದ್ದೇಗೌಡ, ಮನ್‌ಮುಲ್ ಅಧ್ಯಕ್ಷ ಬಿ.ಆರ್. ರಾಮಚಂದ್ರ, ಪಿಇಟಿ ಅಧ್ಯಕ್ಷ ಕೆ.ಎಸ್. ವಿಜಯಾನಂದ ಇತರರು ಮೃತರ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!