ಕಾಯಕಯೋಗಿ ಸಮೂಹ ಸಂಸ್ಥೆ, ಸಿದ್ದಗಂಗಾಶ್ರೀ ಸೇವಾ ಸಮಿತಿ, ಸಿದ್ದಗಂಗಾ ಮಠದ ಹಳೇಯ ವಿದ್ಯಾರ್ಥಿಗಳು ಮತ್ತು ಹಿತೈಷಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರ 116ನೇ ಜನ್ಮದಿನಾಚರಣೆ ಹಾಗೂ ಕಾಯಕಯೋಗಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏ.1ರಂದು ಬೆಳಿಗ್ಗೆ 9 ಗಂಟೆಗೆ ಮಂಡ್ಯನಗರದ ಸ್ವರ್ಣಸಂದ್ರ ಬಡಾವಣೆಯ ಶ್ರೀಶಿವಕುಮಾರಮಹಾಸ್ವಾಮೀಜಿ ಉದ್ಯಾನವನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದಗಂಗಾ ಮಠದ ಹಳೇಯ ವಿದ್ಯಾರ್ಥಿಗಳು ಮತ್ತು ಹಿತೈಷಿಗಳ ಸಂಘದ ಹಿರಿಯ ಸಲಹೆಗಾರ ಹೆಚ್.ಸಿ.ಮಂಜುನಾಥ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಡೆಯುವ ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯೆ ಕೆ.ವಿದ್ಯಾ ಮಂಜುನಾಥ್ ಅಧ್ಯಕ್ಷತೆ ವಹಿಸುವರು. ಶಾಸಕ ಎಂ.ಶ್ರೀನಿವಾಸ್, ನಗರಸಭಾಧ್ಯಕ್ಷ ಹೆಚ್.ಎಸ್.ಮಂಜು, ಸ್ಥಾಯಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ ಪುಟ್ಟಸ್ವಾಮಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದರು.
ಸ್ವಾಮೀಜಿಯವರ ಹೆಸರು ಪಡೆದಿರುವ ಉದ್ಯಾನವನವನ್ನು ದತ್ತು ಪಡೆದು ಕಳೆದ 10 ವರ್ಷಗಳಿಂದ ನಿರ್ವಹಣೆ ಮಾಡುತ್ತಾ ಬಂದಿರುವ ಕಾಯಕಯೋಗಿ ಫೌಂಡೇಶನ್ ವಿವಿಧ ಕ್ಷೇತ್ರಗಳ ಸಾಧಕರಿಗೆ ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.
ಗೋಷ್ಠಿಯಲ್ಲಿ ಮುಖಂಡರಾದ ಎಂ.ಎಸ್.ಮಂಜುನಾಥ್, ಎಂ.ಆರ್.ಮಂಜುನಾಥ್, ವಿದ್ಯಾರ್ಥಿ ಒಕ್ಕೂಟದ ಜೀವನ್, ಮಲ್ಲಿಕಾರ್ಜುನ್, ಎಂ.ವಿಶ್ವನಾಥ್ ಹಾಗೂ ಮಿಲಿಟರಿ ಸುರೇಶ್ ಉಪಸ್ಥಿತರಿದ್ದರು.