Saturday, May 4, 2024

ಪ್ರಾಯೋಗಿಕ ಆವೃತ್ತಿ

ಡಾ.ಶಿವಕುಮಾರಸ್ವಾಮೀಜಿ 116ನೇ ಜನ್ಮದಿನ ಆಚರಣೆ : ಸಾಧಕರಿಗೆ ಸನ್ಮಾನ

ಮಂಡ್ಯ ನಗರದಲ್ಲಿರುವ ಸ್ವರ್ಣಸಂದ್ರದ ಡಾ.ಶಿವಕುಮಾರ ಮಹಾಸ್ವಾಮಿಜಿ ಉದ್ಯಾನವನದಲ್ಲಿ ಕಾಯಕಯೋಗಿ ಫೌಂಡೇಶನ್ ಮತ್ತು ಸಿದ್ಧಗಂಗಾ ಶ್ರೀ ಮಠದ ಭಕ್ತರು ಆಯೋಜಿಸಿದ್ದ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಮಹಾಸ್ವಾಮೀಜಿಯವರ 116ನೇ ಜನ್ಮದಿನ ಮತ್ತು ಕಾಯಕಯೋಗಿ ಪ್ರಶಸ್ತಿ ಪ್ರದಾನ ಸಮಾರಂಭವು ಯಶಸ್ವಿಯಾಗಿ ನಡೆಯಿತು.

ಇದೇ ಸಂದರ್ಭದಲ್ಲಿ ಬಿದರಹಳ್ಳಿ ಗುರು ಮಲ್ಲೇಶ್ವರ ಮಠದ ಪೀಠಾಧ್ಯಕ್ಷ ಗುರು ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.

ವಿವಿಧ ಕ್ಷೇತ್ರಗಳಲ್ಲಿನ ಸಾಧಕರಾದ ಕನ್ನಡಪರ ಹೋರಾಟಗಾರ ಮಂಜುನಾಥ, ಶೈಕ್ಷಣಿಕ ಸಾಧಕಿ ತನುಷ, ಸಮಾಜ ಸೇವಕ ಕಾಡುಕೊತ್ತನಹಳ್ಳಿ ನಂದೀಶ್, ಆಲಕೆರೆ ಮಹೇಶ್, ಮಹದೇವಚಾರ್, ಕಾರ್ಮಿಕ ಮಾದಪ್ಪ ಇವರಿಗೆ ಗಣ್ಯರ ಸಮ್ಮುಖದಲ್ಲಿ ಕಾಯಕಯೋಗಿ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಶಿವಕುಮಾರ್ , ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್ ಸಂದೇಶ್, ಹಿಂದಿಸಭಾ ಅಧ್ಯಕ್ಷ ಎಸ್ ವಿನಯ್ ಕುಮಾರ್, ಶ್ರೀಸಿದ್ದಗಂಗಾ ಸೇವಾ ಟ್ರಸ್ಟ್ ಅಧ್ಯಕ್ಷ ಎಂ ಆರ್ ಮಂಜುನಾಥ್, ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಮತ್ತು ಹಿತೈಷಿಗಳ ಸಂಘದ ಅಧ್ಯಕ್ಷ ಮಂಡಿಬೆಟ್ಟಹಳ್ಳಿ ಮಂಜುನಾಥ್, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಅನುಪಮಾ ಸೇರಿದಂತೆ ಹಲವರು ಇದ್ದರು.

ಇದೇ ಸಂದರ್ಭದಲ್ಲಿ ನಡೆದಾಡುವ ದೇವರು ಮತ್ತು ತ್ರಿವಿಧ ದಾಸೋಹಿ ಡಾ. ಶಿವಕುಮಾರ ಮಹಾಸ್ವಾಮಿಜಿಯವರ ಜನ್ಮದಿನ ಪ್ರಯುಕ್ತ ಅನ್ನದಾಸೋಹ ಕಾರ್ಯವು ಯಶಸ್ವಿಯಾಗಿ ನಡೆದು ಸಂಪನ್ನಗೊಂಡಿತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!