Thursday, September 19, 2024

ಪ್ರಾಯೋಗಿಕ ಆವೃತ್ತಿ

ಬರಗಾಲದಲ್ಲಿ ಜನರಿಗೆ ಗ್ಯಾರಂಟಿ ಯೋಜನೆಗಳು ಸಹಕಾರಿ: ಪಿ.ಎಂ.ನರೇಂದ್ರ ಸ್ವಾಮಿ

ಬರಗಾಲದಲ್ಲಿ ಜನರಿಗೆ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ತಾಲ್ಲೂಕಿನ ಮಾಗನೂರು,ಸಸಿಯಾಲಪುರ,ಗಾಣಿಗನಪುರ,ಬಂಡೂರು,ದಡದಪುರ, ಹಿಟ್ಟನಹಳ್ಳಿ ಕೊಪ್ಪಲು, ದೋರನಹಳ್ಳಿ, ಹಳ್ಳದ ಕೊಪ್ಪಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರಸ್ತೆ ಚರಂಡಿ ಅಭಿವೃದ್ದಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರೆವೇರಿಸಿದ ನಂತರ ಮಾತನಾಡಿದ ಅವರು, ಬರಗಾಲದ ನಡುವೆಯೂ ಜನರು ನೆಮ್ಮದಿಯಿಂದ ಬದುಕಲು ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ. ಸಂಕಷ್ಟದಲ್ಲಿರುವ ಜನರ ಜೊತೆ ಇರುವ ಕಾಂಗ್ರೆಸ್ ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಕೈಹಿಡಿಯುತ್ತಾರೆಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪಧಿ೯ಸುತ್ತಿರುವ ವೆಂಕಟರಾಮೇಗೌಡ (ಸ್ಟಾರ್ ಚಂದ್ರು) ಅವರು ಮಾಚ್೯ 12 ರಂದು ಮಳವಳ್ಳಿ ಪಟ್ಟಣದ ಟಿಎಪಿಸಿಎಂಎಸ್ ಮುಂಭಾಗದ ಆವರಣದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಆಗಮಿಸುತ್ತಿದ್ದು,ಸಾರ್ವಜನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ಮನವಿ ಮಾಡಿದರು.

ವಿಶ್ವೇಶ್ವರಯ್ಯ ನಾಲಾ ಆಧುನೀರಣಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಸಂಪೂರ್ಣ ಬಗೆಹರಿಯಲಿದೆ,ಈಗಾಗಲೇ ನೂರಾರು ಕೋಟಿ ಅನುದಾನವನ್ನು ತಂದು ಕ್ಷೇತ್ರ ವನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿಯೂ ನೀರಾವರಿ,ಶಿಕ್ಷಣ ,ಆರೋಗ್ಯ ಸೇರಿದಂತೆ ಗ್ರಾಮೀಣ ರಸ್ತೆ ಮತ್ತು ಕುಡಿಯುವ ನೀರಿಗೆ ಹೆಚ್ಚು ಒತ್ತು ನೀಡಲಾಗುವುವುದು ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾಪಂಚಾಯಿತಿ ಮಾಜಿ ಸದಸ್ಯರಾದ ಸುಜಾತ ಕೆ.ಎಂ ಪುಟ್ಟು,ಆರ್.ಎನ್ ವಿಶ್ವಾಸ್,ತಾ.ಪಂ ಉಪಾಧ್ಯಕ್ಷ ಸಿ.ಮಾಧು, ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ,ಮುಖಂಡರಾದ ಟಿ.ಸಿ ಚೌಡಯ್ಯ,ವಿಶ್ವ,,ಮನು ಅರಸು,ಜಗದೀಶ್,ಶಾಂತರಾಜು,ಅಂಬರೀಶ್ ,ಶಿವಕುಮಾರ್ ,ರವೀಂದ್ರ,ಮಹೇಶ್ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!