Thursday, September 19, 2024

ಪ್ರಾಯೋಗಿಕ ಆವೃತ್ತಿ

ಡಿವಿಪಿ ವತಿಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ

ವಿಶ್ವರತ್ನ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತೋತ್ಸವದ ಅಂಗವಾಗಿ ದಲಿತ ವಿಧ್ಯಾರ್ಥಿ ಪರಿಷತ್ ರಾಜ್ಯ ಸಮಿತಿ ವತಿಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯು ನಡೆಯಲಿದೆ.

ನಾಡಿನ ಎಲ್ಲಾ ವಿದ್ಯಾರ್ಥಿ ಹಾಗೂ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳಲು ಮನವಿ

ಪ್ರಥಮ ಬಹುಮಾನ 3 ಲಕ್ಷ ರೂಪಾಯಿಗಳು

ದ್ವಿತೀಯ ಬಹುಮಾನ 2 ಲಕ್ಷ ರೂಪಾಯಿಗಳು

ತೃತೀಯ ಬಹುಮಾನ 1 ಲಕ್ಷ ರೂಪಾಯಿಗಳು

ಹಾಗೂ ಪ್ರಥಮ ನೂರು ಸ್ಥಾನ ಪಡೆದ ವಿಧ್ಯಾರ್ಥಿಗಳಿಗೆ ರಾಜ್ಯದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆ ಕೇಂದ್ರಗಳಲ್ಲಿ ಉಚಿತ ತರಬೇತಿ ನೀಡಲಾಗುವುದು.

15 ರಿಂದ 35 ವರ್ಷ ವಯೋಮಾನದ ವಿದ್ಯಾರ್ಥಿ, ಯುವಜನರು ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಸರ್ಕಾರಿ ಮತ್ತು ಗುತ್ತಿಗೆ ಆಧಾರಿತ ಸರ್ಕಾರಿ ಇಲಾಖೆಗಳ ನೌಕರರಿಗೆ ಈ ಪರೀಕ್ಷೆಯಲ್ಲಿ ಆವಕಾಶವಿರುವುದಿಲ್ಲ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿ‍ಷೇದ ವಿಧಿಸಲಾಗಿದೆ.

ನೋಂದಣಿ ಮಾಡಲು 15 ಜೂನ್, 2022 ಕೊನೆಯ ದಿನಾಂಕವಾಗಿರುತ್ತದೆ. ನೊಂದಣಿ ಶುಲ್ಕ 100 ರೂ ಆಗಿರುತ್ತದೆ.

ಹೆಚ್ಚಿನ ಮಾಹಿತಿಗೆ 9380678859 9740420826 ಇವರನ್ನು ಸಂಪರ್ಕಿಸ ಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಓಪನ್ ಮಾಡಿ http://thedvp.org/registration/

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!