Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಹಲವು ಪದಾಧಿಕಾರಿಗಳ ಆಯ್ಕೆ

ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಉಪಾಧ್ಯಕ್ಷರಾಗಿ ನವೀನ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಆನಂದ್, ಕಾರ್ಯದರ್ಶಿಯಾಗಿ ಲೋಕೇಶ್ ಆಯ್ಕೆಯಾದರು.

ಉಪಾಧ್ಯಕ್ಷರಾಗಿದ್ದ ಬಿ ಪಿ.ಪ್ರಕಾಶ್‌ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ  ಕೆ.ಎನ್. ನವೀನ್ ಕುಮಾರ್ ಆಯ್ಕೆಯಾದರು. ನವೀನ್ ಕುಮಾರ್ ಅವರಿಂದ ತೆರವಾದ ಹುದ್ದೆಗೆ
ಪ್ರಧಾನ ಕಾರ್ಯದರ್ಶಿಯಾಗಿ ಆನಂದ್, ಆನಂದ್ ಅವರಿಂದ ತೆರವಾದ ಕಾರ್ಯದರ್ಶಿ ಹುದ್ದೆಗೆ ಚಿನಕುರಳಿ ಲೋಕೇಶ್ ಅವಿರೋಧವಾಗಿ ನೇಮಕಗೊಂಡರು. ನಾಮ ನಿರ್ದೇಶಿತ ನಿರ್ದೇಶಕರಾಗಿ ಕಾಳೇನಹಳ್ಳಿ ಆನಂದ್ ಆಯ್ಕೆ ಮಾಡಲಾಯಿತು. ಬುಧವಾರ ನಡೆದ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಘೋಷಣೆ ಮಾಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ಪಿ.ಪ್ರಕಾಶ್‌, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಗಳಾದ ಮತ್ತಿಕೆರೆ ಜಯರಾಮ್, ಸೋಮಶೇಖರ್ ಕೆರಗೋಡು, ಮಾಜಿ ಅಧ್ಯಕ್ಷ ಕೆ.ಸಿ.ಮಂಜುನಾಥ್, ರಾಷ್ಟ್ರೀಯ ಮಂಡಳಿ ಸದಸ್ಯ ಜಿಗುಂಡಿಪಟ್ಟಣ ಬಾಲು, ಜಿಲ್ಲಾ ಉಪಾಧ್ಯಕ್ಷ ರವಿ, ಜಿಲ್ಲಾ ಖಜಾಂಚಿ ಆರ್. ಎನ್. ನಂಜುಂಡಸ್ವಾಮಿ, ಗ್ರಾಮಾಂತರ ಕಾರ್ಯದರ್ಶಿ ಬಿ. ಎಸ್.ಜಯರಾಮು, ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!