Thursday, September 19, 2024

ಪ್ರಾಯೋಗಿಕ ಆವೃತ್ತಿ

ಆರೋಗ್ಯ ಕಾರ್ಯಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಬೆಳಗೊಳ ಆರೋಗ್ಯಮತ್ತು ಕ್ಷೇಮ ಕೇಂದ್ರದ ವತಿಯಿಂದ ವಿದ್ಯಾರ್ಥಿಗಳಿಗಾಗಿ ವೈಯಕ್ತಿಕ ಸ್ವಚ್ಚತೆ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ, ಆಯುಷ್ಮಾನ್‌, ಭಾರತ್- ಆರೋಗ್ಯ ಕರ್ನಾಟಕ ಹಾಗೂ ಸಾಂಕ್ರಾಮಿಕ ರೋಗಗಳ ವಿಷಯಗಳ ಕುರಿತಂತೆ “ಪ್ರಬಂಧ ಸ್ಪರ್ಧೆ” ಏರ್ಪಡಿಸಿ ಅರಿವು ಮೂಡಿಸಲಾಯಿತು.

ಪ್ರಬಂಧ ಸ್ಪರ್ಧೆಯಲ್ಲಿ ಭೂಮಿಕ ಆರ್ (ಪ್ರಥಮ), ನಿಮಿಷಾಂಬ (ದ್ವಿತೀಯ), ಜೀವಿತ (ತೃತೀಯ) ಬಹುಮಾನಕ್ಕೆ ಆಯ್ಕೆಯಾದರು.

ವೈದ್ಯಾಧಿಕಾರಿ ಡಾ.ಮೃಣಾಲಿನಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು ಪಾಲಕರಿಗೆ ಹಾಗೂ ಸಮುದಾಯಕ್ಕೆ ತಿಳಿಸುವ ಕೆಲಸ ಮಾಡಬೇಕು. ಶಿಕ್ಷಣದ ಜೊತೆ ಆರೋಗ್ಯಕ್ಕೂ ಹೆಚ್ಚು ಒತ್ತು ನೀಡಬೇಕೆಂದು ಮಕ್ಕಳಿಗೆ ಸಲಹೆ ನೀಡಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ ಮಾತನಾಡಿ, ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು ಸೊಳ್ಳೆಗಳ ಉತ್ಪತ್ತಿ ತಾಣಗಳ ಬಗ್ಗೆ ಜಾಗೃತಿ ವಹಿಸಿ ನೀರಿನ ಸಂಗ್ರಹಗಳನ್ನು ಸರಿಯಾದ ರೀತಿಯಲ್ಲಿ ಮುಚ್ಚಬೇಕು. ವಾರಕ್ಕೊಮ್ಮೆ ಸ್ವಚ್ಚ ಗೊಳಿಸಬೇಕು, ಮನೆಯ ಸುತ್ತಮುತ್ತ ತ್ಯಾಜ್ಯ ಸಂಗ್ರಹವಾಗದಂತೆ ಮತ್ತು ನೀರು ನಿಲ್ಲದಂತೆ ಎಚ್ಚರ ವಹಿಸಿ ಸೊಳ್ಳೆ ಕಚ್ಚದಂತೆ ಮೈತುಂಬ ಬಟ್ಟೆ ಧರಿಸಿ ಮಲಗುವಾಗ ತಪ್ಪದೇ ಸೊಳ್ಳೆ ಪರದೆ ಉಪಯೋಗಿಸಿ, ಜ್ವರ ಬಂದಾಗ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳಬೇಕೆಂದು ಮಕ್ಕಳಿಗೆ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಹ ಶಿಕ್ಷಕ ಕೆ ರಾಜು, ಶಿಕ್ಷಕರಾದ ರೂಪ ಆರ್, ಚಿತ್ರ ಯು ಪಿ,ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಟಿ ಟಿ ಜ್ಯೋತಿ, ಆಶಾ ಕಾರ್ಯಕರ್ತೆ ಜಯಂತಿ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!