Thursday, September 19, 2024

ಪ್ರಾಯೋಗಿಕ ಆವೃತ್ತಿ

ನಟ ದರ್ಶನ್‌ ಮತ್ತು ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್‌ ಸೋಮವಾರ ಆದೇಶ ಹೊರಡಿಸಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು (ಸೆ.9) ಕೊನೆ ಆಗುವುದಿತ್ತು. ಹೀಗಾಗಿ ಅವರನ್ನು ಕೋರ್ಟ್ ಎದುರು ಹಾಜರುಪಡಿಸಿಲಾಗಿತ್ತು.

ಆರೋಪಿ ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ, ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು. ಈ ವೇಳೆ ಎಲ್ಲ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆ.​ 12ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ನೀಡಿತು.

ಜಾಮೀನಿಗೆ ಅರ್ಜಿ ಸಲ್ಲಿಕೆಗೆ ಸಿದ್ಧತೆ

ನಟ ದರ್ಶನ್ ಅವರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪತ್ನಿ ವಿಜಯಲಕ್ಷ್ಮಿ ಅವರು ಈಗಾಗಲೇ ಜಾಮೀನು ಅರ್ಜಿಗೆ ದರ್ಶನ್ ಅವರಿಂದ ಸಹಿ ಪಡೆದಿದ್ದಾರೆ ಎನ್ನಲಾಗಿದೆ.

ದರ್ಶನ್ ಜೈಲು ಸೇರಿ ಮೂರು ತಿಂಗಳು ಕಳೆಯುತ್ತಾ ಬಂದಿದೆ. ಜೂನ್ 11ರಂದು ದರ್ಶನ್, ಪವಿತ್ರಾ ಮೊದಲಾದವರು ಅರೆಸ್ಟ್ ಆಗಿದ್ದರು. ಆ ಬಳಿಕ ಹಂತ ಹಂತವಾಗಿ ಆರೋಪಿಗಳು ಬಂಧನಕ್ಕೆ ಒಳಗಾಗಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!