Thursday, September 19, 2024

ಪ್ರಾಯೋಗಿಕ ಆವೃತ್ತಿ

ನೇತ್ರದಾನ ಪಾಕ್ಷಿಕ ಆಚರಣೆ

ಅಂಧರ ಬಾಳಿಗೆ ಬೆಳಕಾಗುವ ಉದ್ದೇಶದಿಂದ ನೇತ್ರದಾನ ಪಾಕ್ಷಿಕ ಕಾರ್ಯಕ್ರಮ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗದ ವತಿಯಿಂದ 37ನೆಯ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಸಮಾರಂಭ ಶ್ರೀರಂಗಪಟ್ಟಣದಲ್ಲಿ ನಡೆಯಿತು.

ಪುರಸಭೆ ಅಧ್ಯಕ್ಷೆ ನಿರ್ಮಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮರಣದ ನಂತರ ಕಣ್ಣನ್ನು ಸುಡುವುದು ಅಥವಾ ಮಣ್ಣು ಮಾಡುವುದಕ್ಕಿಂತ ದಾನ ಮಾಡುವದು ಶ್ರೇಷ್ಠ ಎಂದರು.

ಜಿಲ್ಲಾ ಅಂಧತ್ವ ನಿಯಂತ್ರಣ ಅಧಿಕಾರಿ ಡಾ. ಕೆ ಪಿ ಅಶ್ವಥ್ ಮಾತನಾಡಿ, ತಮ್ಮ ನೇತ್ರಗಳು ಸದಾ ಜೀವಂತವಾಗಿರಲಿ, ಅಂಧರ ಬಾಳಿಗೆ ಬೆಳಕಾಗಿ ಎಂಬ ಘೋಷಣೆಯೊಂದಿಗೆ ಪಾಕ್ಷಿಕ ಆಚರಣೆ ಮಾಡಲಾಗುತ್ತಿದೆ ಎಂದರು.

ಹೊಸದಾಗಿ ಆನ್ ಲೈನ್ ನಲ್ಲಿ ಜೀವ ಸಾರ್ಥಕತೆ ವೆಬ್ ಸೈಟ್ ಮೂಲಕ 18 ವರ್ಷ ಮೇಲ್ಪಟ್ಟ ನಾಗರಿಕರು ನೇತ್ರದಾನ ಮಾಡಲು ನೋಂದಣಿ ಮಾಡಿಸಬಹುದು ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎನ್ ಕೆ ವೆಂಕಟೇಶ್, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಶಿವಾನಂದ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಕೆ ಜಿ ಭವಾನಿಶಂಕರ ಜಿಲ್ಲಾ ಕುಟುಂಬ ಕಲ್ಯಾಣ ಅನುಷ್ಠಾನ ಅಧಿಕಾರಿ ಡಾ. ಶಶಿಧರ, ಮುಖ್ಯ ವೈದ್ಯಾಧಿಕಾರಿ ಡಾ. ಪಿ ಮಾರುತಿ, ಡಾ. ಸುರೇಶ್, ಡಾ.ಮಂಜುನಾಥ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ, ಭಾಗವಹಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!