ಭಾರೀ ಗಾತ್ರದ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಜಖಂಗೊಂಡು, ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಸಂಭವಿಸಿದೆ.
ಮಂಡ್ಯ ತಾಲೂಕು ಬಸರಾಳು ಹೋಬಳಿಯ ಕೋಡಿ ಕೊಪ್ಪಲು ಗ್ರಾಮದ ಬಳಿ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾಗೇಶ್ ಅವರು ತಮ್ಮ ಶಾಲೆಯಿಂದ ಬಸರಾಳು ನಲ್ಲಿರುವ ಶಾಲೆಗೆ ನೋಟ್ ಪುಸ್ತಕಗಳನ್ನು ತರಲು ಡ್ರೈವರ್ ಜೊತೆ ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೋಡಿಕೊಪ್ಪಲು ಗ್ರಾಮದ ಬಳಿ ಭಾರಿ ಗಾತ್ರದ ಚಿಬ್ಲು(ಕಿಜ್ಲು)ಮರ ಏಕಾಏಕಿ ಕಾರಿನ ಮೇಲೆ ಉರುಳಿಬಿದ್ದಿದೆ.
ಮರ ಬಿದ್ದ ಪರಿಣಾಮ ಕಾರು ಬಹುತೇಕ ಜಖಂಗೊಂಡಿದ್ದು, ಶಿಕ್ಷಕ ನಾಗೇಶ್ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನು ಓದಿ: ವರ್ಷವಿಡೀ ರಾಜಕೀಯ ಮಾಡಿದ್ದಾರೆ ಅಷ್ಟೇ : ಅಶ್ವಥ್ ನಾರಾಯಣ್