Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೌಟುಂಬಿಕ ಕಲಹ: ದಂಪತಿಗಳಿಬ್ಬರೂ ಪ್ರತ್ಯೇಕವಾಗಿ ನೇಣಿಗೆ ಶರಣು

ಶ್ರೀರಂಗಟ್ಟಣ ತಾಲ್ಲೂಕಿನ ಕಿರಂಗೂರು ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳಿಬ್ಬರು ಪ್ರತ್ಯೇಕವಾಗಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಗ್ರಾಮದ ನಿವಾಸಿ ಪ್ರಭಾವತಿ(40) ಮಂಗಳವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಪತಿ ದಿಲೀಪ್ (45) ಗ್ರಾಮದ ಹೊರವಲಯದ ಜಮೀನಿನ ಮರದಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಬುಧವಾರ ಬೆಳಿಗ್ಗೆ ಶವ ಪತ್ತೆಯಾಗಿದೆ.

ಮೃತ ದಂಪತಿಗಳಿಗೆ ಹದಿಮೂರು ವರ್ಷದ ಮಗನಿದ್ದು, ಸುತ್ತೂರು ಮಠದಲ್ಲಿ ವ್ಯಾಸಾಂಗ ಮಾಡುತ್ತಿರುವುದಾಗಿ ತಿಳಿದು ಬಂದಿದೆ.
ಪತಿ ಹಾಗೂ ಪತ್ನಿ ನಡುವೆ ನಡೆದ ಜಗಳವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ಈ ಸಂಬಂಧ ಪಟ್ಟಣ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ‌ ಕೈಗೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!