ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಗೆ ಪತಿ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದಲ್ಲಿ ಜರುಗಿದೆ.
ಗಂಗವಾಡಿ ಗ್ರಾಮದ ಗೌರಮ್ಮ ಚಾಕುವಿನಿಂದ ಇರಿತಕ್ಕೊಳಗಾದ ಮಹಿಳೆ. ಅದೇ ಗ್ರಾಮದ ಕೃಷ್ಣಮೂರ್ತಿ ಪತ್ನಿಗೆ ಚಾಕುವಿನಿಂದ ಇರಿದ ಪತಿ.
ಪದೇ ಪದೇ ಇಬ್ಬರ ನಡುವಿನ ಜಗಳ ನಡೆಯುತ್ತಿದ್ದು, ರಾಜಿ ಪಂಚಾಯ್ತಿ ಕೂಡ ಮಾಡಲಾಗಿತ್ತು ಎನ್ನಲಾಗಿದೆ.
ಭಾನುವಾರ ಚೀಣ್ಯ ಗ್ರಾಮಕ್ಕೆ ಆಗಮಿಸಿದ್ದ ಗೌರಮ್ಮ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲು ಯತ್ನಿಸಲಾಗಿದೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಗೌರಮ್ಮಳನ್ನು ಸಾರ್ವಜನಿಕರ ಸಹಕಾರದಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಚಾಕುವಿನಿಂದ ಇರಿದ ಪತಿ ಕೃಷ್ಣಮೂರ್ತಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.