ಜನ- ಜಾನುವಾರುಗಳಿಗೆ ಕುಡಿಯಲು ನೀರು ಬಿಡುತ್ತಿಲ್ಲ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಕಚೇರಿಗೆ ರಾಸುಗಳೊಂದಿಗೆ ಮುತ್ತಿಗೆ ಹಾಕಿ ರೈತಸಂಘದ ಮುಖಂಡರು ಮಂಡ್ಯ ತಾಲ್ಲೂಕಿನ ಹೆಮ್ಮಿಗೆ ಗ್ರಾಮದಲ್ಲಿ ಇಂದು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
ಮಂಡ್ಯ ತಾಲೂಕಿನ ಹೆಮ್ಮಿಗೆ ಗ್ರಾಮದ ಎಚ್.ಡಿ.ಕೃಷ್ಣ ಅವರು ರಾಸುಗಳೊಂದಿಗೆ ಸೂನಗಹಳ್ಳಿ ಗ್ರಾಮ ಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿ ನೀರು ಕೊಡಿ ಎಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ಕಳೆದ 6 ದಿನಗಳಿಂದ ಗ್ರಾಮಕ್ಕೆ ಪಂಚಾಯಿತಿಯವರು ನೀರು ಬಿಟ್ಟಿಲ್ಲ.ಇದರಿಂದ ಜನರ-ಜಾನುವಾರುಗಳಿಗರ ನೀರಿಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕೂಡಲೇ ಸೂನಗಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಜನ – ಜಾನುವಾರುಗಳ ಕುಡಿಯುವ ನೀರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.