Saturday, May 18, 2024

ಪ್ರಾಯೋಗಿಕ ಆವೃತ್ತಿ

ಕನ್ನಂಬಾಡಿ ಭರ್ತಿ: ಪ್ರವಾಹ ಮುನ್ನೆಚ್ಚರಿಕೆ ಸೂಚನೆ

ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿದ್ದು,ನದಿಪಾತ್ರದಲ್ಲಿರುವ ಹಾಗೂ ತಗ್ಗುಪ್ರದೇಶದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಕಾವೇರಿ ನದಿಗೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 75,000 ರಿಂದ 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಹಾಗೂ ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ.

ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಬೇಕೆಂದು ಕೃಷ್ಣರಾಜಸಾಗರ ಕಾನೀನಿನಿ ಕೃ.ರಾ.ಸಾಗರ ವಿಭಾಗದ ಕಾರ್ಯಪಾಲಕ ಅಭಿಯಂತರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!