Thursday, September 19, 2024

ಪ್ರಾಯೋಗಿಕ ಆವೃತ್ತಿ

ಡಿ.10ಕ್ಕೆ ಚಿಕ್ಕಲ್ಲೂರಿನಲ್ಲಿ ಸ್ವಚ್ಛತಾ ಅಭಿಯಾನ

ಮಳವಳ್ಳಿ ತಾಲ್ಲೂಕಿನ ಶ್ರೀಕ್ಷೇತ್ರ ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಸ್ಥಾನದ ಆವರಣದಲ್ಲಿ ಡಿಸೆಂಬರ್ 10 ರಂದು “ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಭಕ್ತರು, ನೀಲಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮಳವಳ್ಳಿ ಆದಿ-ಹೊನ್ನಾಯಕನಹಳ್ಳಿ ಮಂಟೇಸ್ವಾಮಿ ಮಠದ ಪೀಠಾಧ್ಯಕ್ಷರಾದ ವರ್ಚಸ್ವಿ ಶ್ರೀಕಂಠ ಸಿದ್ದಲಿಂಗರಾಜೇ ಅರಸು ತಿಳಿಸಿದರು.

ದೇವಸ್ಥಾನವನ್ನು ಸ್ವಚ್ಛವಾಗಿಡಬೇಕೆಂಬ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಲಾಗಿದೆ. ಈ ಹಿನ್ನಲೆಯಲ್ಲಿ ಡಿ.10 ರಂದು ಬೆಳಗ್ಗೆ 9 ಗಂಟೆಗೆ ಚಿಕ್ಕಲ್ಲೂರು ಸಿದ್ದಪ್ಪಾಜಿ ಅವರ ಹಳೆ ಮಠದ ದೇವಸ್ಥಾನ ಹಾಗೂ ಸುತ್ತಲ ಸಂಪೂರ್ಣ ತೋಪಿನಲ್ಲಿ’ಸ್ವಚ್ಛತಾ ಅಭಿಯಾನ’ವನ್ನು ಹಮ್ಮಿಕೊಳ್ಳಲಾಗಿದೆ.

ಈ ಅಭಿಯಾನದಲ್ಲಿ ಮಂಟೇಸ್ವಾಮಿ ಪರಂಪರೆಯ ದಳವಾಯಿಗಳು ಎಂದೆನಿಸುವ ‘ನೀಲಗಾರರು’ ತಮ್ಮ ಅಪಾರ ಅನುಯಾಯಿಗಳು ಭಕ್ತಸಮೂಹದೊಡನೆ ಪಾಲ್ಗೊಂಡು ಶ್ರೀಕ್ಷೇತ್ರವನ್ನು ಸ್ವಕ್ಷೇತ್ರವೆಂದು ಭಾವಿಸಿ ಆಯೋಜನೆಗೊಂಡಿರುವ ಸ್ವಚ್ಛತಾ ಅಭಿಯಾನವನ್ನು ಯಶಸ್ವಿ ಗೊಳಿಸಬೇಕೆಂದು ಮನವಿ ಮಾಡಿದ್ದಾರೆ‌.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!