Friday, September 20, 2024

ಪ್ರಾಯೋಗಿಕ ಆವೃತ್ತಿ

ಗಾರ್ಮೆಂಟ್ಸ್ ಕಾರ್ಮಿಕರಿಗೆ ಸಿಗದ ವೇತನ; ಕಾರ್ಮಿಕರ ಮುಖಂಡರ ಭೇಟಿ- ಮಾತುಕತೆ

ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯ ಬಾಲಾಜಿ ಗಾರ್ಮೆಂಟ್ಸ್ ನಲ್ಲಿ ಕಾರ್ಮಿಕರಿಗೆ ಸರಿಯಾಗಿ ವೇತನ ನೀಡದೇ ESI ಮತ್ತು PF ಕೊಡದೇ ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ಇಂದು ಮಹಿಳಾ ಮುನ್ನಡೆ ರಾಜ್ಯ ಕಾರ್ಯದರ್ಶಿ ಪೂರ್ಣಿಮಾ, ಸಿಐಟಿಯು ನಾಯಕಿ ಸಿ.ಕುಮಾರಿ ಮತ್ತಿತರರು ಕಾರ್ಖಾನೆ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿದರು.

ಕಾರ್ಖಾನೆಗೆ ಭೇಟಿ ನೀಡಿ ಕಾರ್ಮಿಕ ಸಮಸ್ಯ ಕೇಳಿದ ಮುಖಂಡರು, ಕಂಪನಿಯ ಮಾಲೀಕರು ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳ ಜೊತೆಗೂ ಕೂಡಾ ಮಾತುಕತೆ ನಡೆಸಿದರು. ಸೆಪ್ಟೆಂಬರ್ 15 ರ ರೊಳಗೆ ಸಮಸ್ಯೆ ಪರಿಹಾರ ಮಾಡುವುದಾಗಿ ಕಾರ್ಖಾನೆ ಮಾಲೀಕರು ಭರವಸೆ ನೀಡಿದರು.

ಒಂದು ವೇಳೆ ಅಷ್ಟರಲ್ಲಿ ಸಂಬಳ ನೀಡದಿದ್ದಲ್ಲಿ ಹೋರಾಟ ನಡೆಸುವುದಾಗಿ ಮುಖಂಡರು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಜನಶಕ್ತಿಯ ಜಿಲ್ಲಾ ಕಾರ್ಯದರ್ಶಿ ಸಿದ್ದರಾಜು, ಮುಖಂಡರಾದ ಜಗದೀಶ್ ನಗರಗೆರೆ, ಜ್ಯೋತಿ ಮತ್ತು ಶಿಲ್ಪ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!