Friday, May 3, 2024

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

ಮಂಡ್ಯ ತಾಲೂಕಿನ ಬಸರಾಳು ಹೋಬಳಿಯ ಮುತ್ತೇಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದೇಗೌಡಕೊಪ್ಪಲು, ನಂದಹಳ್ಳಿ, ಬುಂಡಾರೆಕೊಪ್ಪಲು, ಎಂ.ಹಟ್ನ,ಹನಗನಹಳ್ಳಿ, ಕಾಲೋನಿ, ಹೊಸಕೊಪ್ಪಲು, ಮುತ್ತೇಗೆರೆ ಗ್ರಾಮದ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಶ್ರೀ ಶಂಭು ಸೇವಾ ಟ್ರಸ್ಟ್ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಶಂಭು ಸೇವಾ ಟ್ರಸ್ಟ್ ಹಾಗೂ ಮನ್ಮುಲ್ ಅಧ್ಯಕ್ಷ ಬಿ.ಆರ್ ರಾಮಚಂದ್ರು ಮಾತನಾಡಿ, ಸರ್ಕಾರಿ ಶಾಲೆಯ ಮಕ್ಕಳು ಸಹ ಉತ್ತಮವಾದ ಗುಣಮಟ್ಟದ ಶಿಕ್ಷಣ ಪಡೆಯಬೇಕೆಂಬುದು ನನ್ನ ಆಸೆ. ಈ ನಿಟ್ಟಿನಲ್ಲಿ ನಾನು ಕೂಡ ಶಾಲಾ ಮಕ್ಕಳಿಗೆ ಅನುಕೂಲವಾಗಲೆಂದು ನಮ್ಮ ಟ್ರಸ್ಟ್ ವತಿಯಿಂದ ಬ್ಯಾಗ್ ಗಳನ್ನು ಹಂಚಿಕೆ ಮಾಡಿದ್ದೇನೆ‌.ಮಕ್ಕಳು ಶ್ರದ್ಧೆಯಿಂದ ಶಿಕ್ಷಣದತ್ತ ಗಮನ ಹರಿಸಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಬೇಕು ಎಂದು ಸಲಹೆ ನೀಡಿದರು.

ಶಂಭು ಸೇವಾ ಟ್ರಸ್ಟ್ ನ ಬಿ.ಆರ್ ಸುರೇಶ್, ಪುಟ್ಟಸ್ವಾಮಿ, ಬಾಲರಾಜು, ಮಾಸ್ತಿಗೌಡ, ಚೆನ್ನಕೇಶವ ಹಾಗೂ ಗ್ರಾಮದ ಮುಖಂಡರು,ಯುವಕರು ಹಾಗೂ ಅಕ್ಕ ಪಕ್ಕದ ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!