Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಹಾ ಕುಂಭಮೇಳಕ್ಕೆ ಯೋಗಿ ಆದಿತ್ಯನಾಥ ಆಗಮನ

ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ಉತ್ತರಪ್ರದೇಶದ ಲಖನೌದಲ್ಲಿಂದು ಯೋಗಿ ಆದಿತ್ಯನಾಥ್ ಅವರನ್ನು ಖುದ್ದು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಅವರು ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಆಹ್ವಾನ ನೀಡಿದರು.

ಅಕ್ಟೋಬರ್ 13 ರಿಂದ 16 ರ ವರೆಗೂ ಕೆ.ಆರ್ ಪೇಟೆಯ ಲಕ್ಷ್ಮಣತೀರ್ಥ-ಹೇಮಾವತಿ-ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ. ಈ ಮಹಾಕುಂಭ ಮೇಳದಲ್ಲಿ ಅಕ್ಟೋಬರ್ 16 ರಂದು ಪಾಲ್ಗೊಳ್ಳುವುದಾಗಿ ಯೋಗಿ ಆದಿತ್ಯನಾಥ್ ಅವರು ಒಪ್ಪಿಗೆ ಸೂಚಿಸಿದರು ಎಂದು ಸಚಿವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೆಪಿಎಸ್‌ಸಿ ಸದಸ್ಯ ಪ್ರಭುದೇವ್, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!