ಮಂಡ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಡಣಾಯಕನಪುರ, ಡಣಾಯಕನಪುರ ಕಾಲೋನಿ, ಮುದ್ದುಂಗೆರೆ, ಹೊನಗಾನಹಳ್ಳಿ ಕಾಲೋನಿ, ಹೊನಗಾನಹಳ್ಳಿ ಮಠ, ಆಲಕೆರೆ, ಈಚಗೆರೆ ಗ್ರಾಮಗಳ ಸರ್ಕಾರಿ ಶಾಲಾ ಮಕ್ಕಳಿಗೆ ಶ್ರೀ ಶಂಭು ಸೇವಾ ಟ್ರಸ್ಟ್ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಶಂಭು ಸೇವಾ ಟ್ರಸ್ಟ್ ಕಾರ್ಯದರ್ಶಿ ಬಿ.ಆರ್ ಸುರೇಶ್ ಮಾತನಾಡಿ, ಮಂಡ್ಯ ಕ್ಷೇತ್ರದ ಯುವ ನಾಯಕ ಮನ್ ಮುಲ್ ಅಧ್ಯಕ್ಷ ಬಿ.ಆರ್ ರಾಮಚಂದ್ರುರವರ ಆಸೆಯಂತೆ ಕ್ಷೇತ್ರದ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್ ಗಳನ್ನು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಗ್ರಾಮಗಳ ಮುಖಂಡರು ಹಾಗೂ ಶಿಕ್ಷಕರ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವ ಮುಖಂಡ ಹೇಮಂತ್ ಮತ್ತಿತರರಿದ್ದರು.