ಬಡ ಪ್ರತಿಭಾವಂತ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಜೆಡಿಎಸ್ ನಾಯಕ ಮುದ್ದನಘಟ್ಟ ಮಹಾಲಿಂಗೇಗೌಡ ಆರ್ಥಿಕ ನೆರವು ನೀಡಿದರು.
ಮಂಡ್ಯ ತಾಲ್ಲೂಕಿನ ಸಾತನೂರು ಗ್ರಾಮದ ಹಿಂದುಳಿದ ವರ್ಗದ ಬಡ ದಂಪತಿಗಳಾದ ರವಿ ಮತ್ತು ಪುಣ್ಯಾವತಿ ಸುಪುತ್ರಿ ಜಮುನಾರವರು ಎಸ್.ಎಸ್. ಎಲ್.ಸಿ ಯಲ್ಲಿ ಶೇಕಡಾ 98% ರಷ್ಟು ಅಂಕಗಳನ್ನು ಪಡೆದು ತೇರ್ಗಡೆಯಾಗಿದ್ದರು.
ಬಡಕುಟುಂಬಕ್ಕೆ ಸೇರಿದ ಜಮುನಾ ಅವರ ಹೆಚ್ಚಿನ ವ್ಯಾಸಂಗಕ್ಕಾಗಿ ಮಹಾಲಿಂಗೇಗೌಡರವರು ತಮ್ಮ ತಂದೆ ತಾಯಿ ಹೆಸರಿನಲ್ಲಿ ಪ್ರಾರಂಭಿಸಿರುವ ಶ್ರೀಮತಿ ತಾಯಮ್ಮ ಮತ್ತು ಶ್ರೀ ರಾಮೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಕೆಯ ಸ್ವಗ್ರಾಮ ಸಾತನೂರಿಗೆ ಭೇಟಿ ನೀಡಿ, ಅಭಿನಂದಿಸಿ ತಮ್ಮ ಕೈಲಾದ ಮಟ್ಟಿಗೆ ಆರ್ಥಿಕವಾಗಿ ಸಹಾಯಹಸ್ತ ಚಾಚಿದರು.
ಹಣ ಉಳ್ಳವರು ಕೂಡ ಈ ಬಡ ಕುಟುಂಬಕ್ಕೆ ಸಹಾಯವನ್ನು ಮಾಡಬೇಕು.ಇದರಿಂದ ಜಮುನಾ ಉತ್ತಮ ಶಿಕ್ಷಣ ಪಡೆಯಲು ಸಹಾಯ ಹಸ್ತ ನೀಡಿದಂತಾಗುತ್ತದೆ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ವೇಣುಗೋಪಾಲ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.