75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ವತಿಯಿಂದ ವರ್ತಕರಿಗೆ ಎರಡು ಸಾವಿರಕ್ಕೂ ಅಧಿಕ ತಿರಂಗ ಧ್ವಜವನ್ನು ವಿತರಣೆ ಮಾಡುತ್ತಿರುವುದಾಗಿ ಮಂಡಳಿ ಅಧ್ಯಕ್ಷ ಕೆ.ಪ್ರಭಾಕರ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಮ್ಮ ಭಾರತ ದೇಶಕ್ಕೆ ಸ್ವಾತಂತ್ರ್ಯ ಬಂದು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸುತ್ತಿರುವುದು ಪ್ರತಿಯೊಬ್ಬ ಭಾರತೀಯನಿಗೂ ಸಂತಸದ ವಿಚಾರವಾಗಿದೆ.
ಈ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯು ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ವರ್ತಕರಿಗೆ ಸುಮಾರು 2000ಕ್ಕೂ ಹೆಚ್ಚು ತಿರಂಗ ಧ್ವಜಗಳನ್ನು ಉಚಿತವಾಗಿ ವಿತರಣೆ ಮಾಡಲಿದೆ ಎಂದು ಹೇಳಿದರು.
ಎಲ್ಲಾ ವರ್ತಕರು ಆಗಸ್ಟ್ 13 ರಿಂದ ದಿನಾಂಕ 15 ವರೆಗೂ ತಮ್ಮ ವ್ಯಾಪಾರದ ಕಟ್ಟಡದ ಮೇಲೆ ತಪ್ಪದೆ ಧ್ವಜಾರೋಹಣ ಮಾಡಿ ದೇಶ ಭಕ್ತಿ ಮೆರೆಯಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಂಡ್ಯ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಉಪಾಧ್ಯಕ್ಷ ಹರಿಪ್ರಸಾದ್, ಕಾರ್ಯದರ್ಶಿ ಸತೀಶ್ ಬಾಬು, ಸಹ ಕಾರ್ಯದರ್ಶಿ ಶಿವು ಹಾಗೂ ಖಜಾಂಚಿ ವೆಂಕಟೇಶ್ ಬಾಬು ಹಾಜರಿದ್ದರು.