Thursday, September 19, 2024

ಪ್ರಾಯೋಗಿಕ ಆವೃತ್ತಿ

ಬಸವೇಶ್ವರ ಸಹಕಾರಿ ಸಂಘದ ಅಧ್ಯಕ್ಷರಾಗಿ ರಮೇಶ್ ಆಯ್ಕೆ

ಕ್ರಾಂತಿಯೋಗಿ ಬಸವೇಶ್ವರ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ರಮೇಶ್ ಹಾಗೂ ಉಪಾಧ್ಯಕ್ಷರಾಗಿ ಆರ್.ಜಿ.ಮಹದೇವಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 15 ಮಂದಿ ನಿರ್ದೇಶಕ ಬಲವಿರುವ ಸಹಕಾರಿ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆರ್.ಜಿ.ಮಹದೇವಸ್ವಾಮಿ ಅವರನ್ನೊರತುಪಡಿಸಿದಂತೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಎನ್.ರವಿಕುಮಾರ್ ಅವರು ಅಧ್ಯಕ್ಷ-ಉಪಾಧ್ಯಕ್ಷರನ್ನು ಘೋಷಿಸಿದರು. ಚುನಾವಣೆ ಬಳಿಕ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಎಸ್.ಇ. ಚನ್ನರಾಜು ಅವರನ್ನು ಗೌರವ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷ ರಮೇಶ್ ಮಾತನಾಡಿ, ಸಹಕಾರಿ ಸಂಘದ ಎಲ್ಲ ನಿರ್ದೇಶಕರು ಒಗ್ಗೂಡಿ ನನ್ನನ್ನೇ ಮತ್ತೊಂದು ಅವಧಿಗೆ ಆಯ್ಕೆ ಮಾಡಿದ್ದೀರಿ, ಎಲ್ಲ ನಿರ್ದೇಶಕರ ಸಹಕಾರದಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿ ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯುವುದಾಗಿ ಭರವಸೆ ನೀಡಿದರು.

ಉಪಾಧ್ಯಕ್ಷ ಆರ್.ಜಿ. ಮಹದೇವಸ್ವಾಮಿ ಮಾತನಾಡಿ, ಮಳವಳ್ಳಿ ವಿಭಾಗದಿಂದ ಸಂಸ್ಥೆಯ ಅಭಿವೃದ್ಧಿಗೆ ಏನೆಲ್ಲಾ ಜವಾಬ್ದಾರಿಗಳನ್ನು ನಿರ್ವಹಿಸಬೇಕೋ ಅದನ್ನು ಮಾಡಲು ಸಿದ್ಧನಿರುವುದಾಗಿ ತಿಳಿಸಿದರು.

ಗೌರವಾಧ್ಯಕ್ಷ ಎಸ್.ಇ. ಚನ್ನರಾಜು ಮಾತನಾಡಿ, ಈ ಹಿಂದೆ ಐದು ವರ್ಷಗಳ ಕಾಲ ಉಪಾಧ್ಯಕ್ಷನಾಗಿ ಕೆಲಸ ಮಾಡಿದ ಅನುಭವವಿತ್ತು. ಎಲ್ಲರೂ ಒಗ್ಗೂಡಿ ಸಂಸ್ಥೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಹಕಾರ ನೀಡುವುದಾಗಿ ತಿಳಿಸಿದರು.

ಸಂಘದ ನಿರ್ದೇಶಕರಾದ ಎಚ್.ಡಿ. ಪರಶಿವಪ್ಪ, ಜಿ.ಎಂ.ಶಿವಲಿಂಗಯ್ಯ, ಬಿ.ಎಸ್.ನಂಜಪ್ಪ, ಎ.ಪಿ. ಮೃತ್ಯುಂಜಯ, ಜೆ.ಸಿ. ಮಹದೇವಸ್ವಾಮಿ, ಡಿ.ಆರ್. ಉಮಾದೇವಿ, ಸಿ. ಭಾಗ್ಯಮ್ಮ, ಡಿ.ಜಿ.ಗಿರೀಶ್, ಎಂ.ಸಿ. ಲೋಕೇಶ್, ಡಿ.ಪ್ರಕಾಶ್, ಎಚ್.ಬಿ.ಲಿಂಗರಾಜು, ಬಿ.ವಿ.ಮಂಜುನಾಥ್, ವಿಶೇಷ ಆಹ್ವಾನಿತರಾಗಿ ವಕೀಲ ಮಲ್ಲಿಕಾರ್ಜುನಸ್ವಾಮಿ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!