Thursday, September 19, 2024

ಪ್ರಾಯೋಗಿಕ ಆವೃತ್ತಿ

ಅರ್ಹರಿಗೆ ಬಗರ್ ಹುಕ್ಕುಂ ಸಾಗುವಳಿ ಪತ್ರ ವಿತರಣೆ : ಗೋಪಾಲಯ್ಯ

ಮುಂದಿನ ದಿನಗಳಲ್ಲಿ ಬಗರ್ ಹುಕ್ಕುಂ ಸಾಗುವಳಿ ಹಕ್ಕು ಪತ್ರ ಕೋರಿ ಅರ್ಜಿ ಸಲ್ಲಿಸಿರುವ  ಬಡ  ಹಾಗೂ  ರೈತ ಕುಟುಂಬಗಳ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ  ಹಕ್ಕು ಪತ್ರ ವಿತರಿಸಲಾಗುವುದು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಉಪಸ್ಥಿತರಿದ್ದರು.

ನಾಗಮಂಗಲ ತಾಲ್ಲೂಕು ಕಚೇರಿ ಆವರಣದಲ್ಲಿ ಶನಿವಾರ  ಅವರು ಅರ್ಹ 150 ಫಲಾನುಭವಿಗಳಿಗೆ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿದರು.

ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ಎಲ್ಲಾ ತಾಲ್ಲೂಕುಗಳಲ್ಲಿ ತೊಂದರೆ ಇದೆ. ಈ ಯೋಜನೆಯಡಿ ಇರುವ ತೊಂದರೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹರಿಸಬಹುದಾದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ರೈತರ ಪರವಾಗಿ ಕೆಲಸ ಮಾಡಲಾಗುವುದು. ಸರ್ಕಾರಿ ಜಾಗದಲ್ಲಿ ಗೋಮಾಳ, ಸ್ಮಶಾನ ಸೇರಿದಂತೆ ವಿವಿಧ ಕೆಲಸಗಳಿಗೆ ಮೊದಲ ಆದ್ಯತೆ ಮೇಲೆ ಸ್ಥಳ ಮೀಸಲಿಡಲಾಗುವುದು. ಸುಮಾರು 19,000 ಅರ್ಜಿಗಳು ಇದ್ದು, ಯಾವುದನ್ನು ಪುರಸ್ಕರಿಸಲು ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಶಾಸಕ ಸುರೇಶ್ ಗೌಡ, ಬಗರ್ ಹುಕುಂ ಸಮಿತಿ ಸದಸ್ಯ ನರಸಿಂಹಮೂರ್ತಿ, ಅನುರಾಧ , ತಹಶೀಲ್ದಾರ್ ನಂದೀಶ್, ಬಿಜೆಪಿ ಮುಖಂಡ ಫೈಟರ್ ರವಿ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!